ಶಬರಿಮಲೆ:ಡಿಸೆಂಬರ್ನಲ್ಲಿ ಕೇರಳದಲ್ಲಿರುವ ಶಬರಿಮಲೆ ಸನ್ನಿಧಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಹಾಗೂ ಅಯ್ಯಪ್ಪ ಮಾಲಾಧಾರಿಗಳು ಆಗಮಿಸುತ್ತಾರೆ. ಭಾನುವಾರದಂದು ಕೂಡ ಮಂಡಲಪೂಜೆಯ ಪ್ರಯುಕ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರಿಂದ ಹಗ್ಗದ ಬ್ಯಾರಿಕೇಡ್ ಮುರಿದು ಭಕ್ತಾದಿಗಳು ಒಬ್ಬರಮೇಲೋಬ್ಬರು ಬಿದ್ದಿದ್ದಾರೆ ಎಂದು ಇಲ್ಲಿನ ಜಿಲ್ಲಾಧಿಕಾರಿ ಆರ್ ಗಿರಿಜಾ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.
ಗಾಯಾಳುಗಳಿಗೆ ಶಬರಿಮಲೆ ಸನ್ನಿಧಾನದ ವೈದ್ಯಕೀಯ ಘಟಕದಲ್ಲೇ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ಕೊಟ್ಟಾಯಂನ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸಲಾಗಿದೆ.
ಈ ಘಟನೆಯ ಹಿನ್ನೆಲೆಯಲ್ಲಿ ಶಬರಿಮಲೆಗೆ ಬರುವ ಅಯ್ಯಪ್ಪ ಭಕ್ತರು ಮೂರು ದಿನ ತಡವಾಗಿ ಪ್ರವಾಸ ಹೊರಡಬೇಕೆಂದು ಕೇರಳ ಪೊಲೀಸರು ಮನವಿ ಮಾಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಪಂಪದಿಂದ ಅಯ್ಯಪ್ಪ ಸನ್ನಿಧಾನಕ್ಕೆ ಬರುವ ಭಕ್ತರನ್ನ ಮಾರ್ಗ ಮಧ್ಯದಲ್ಲೇ ತಡೆದಿದ್ದಾರೆ.