ಮೂವರು ಅಧಿಕಾರಿಗಳ ಮನೆ ಮೇಲೆ ಎ.ಸಿ.ಬಿ ದಾಳಿ ಕೋಟ್ಯಾಂತರ ಆಸ್ತಿ ಪತ್ತೆ

Source: sonews | By Staff Correspondent | Published on 18th July 2018, 8:32 PM | State News | Don't Miss |

ಬೆಂಗಳೂರು: ರಾಜ್ಯದ ಮೂವರು ಸರಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದ ಪ್ರಕರಣ ಸಂಬಂಧ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ದಾಖಲೆ ಪತ್ರಗಳು ಪತ್ತೆಯಾಗಿವೆ.

ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ಬಿ.ವಿಜಯಕುಮಾರ್ ನಿರಾಳಿ ಅವರ ರೈಲ್ವೆ ಸಮಾನಾಂತರ ರಸ್ತೆಯಲ್ಲಿರುವ ಕಚೇರಿ, ಮನೆಗಳ ಮೇಲೆ ಎಸಿಬಿ ತನಿಖಾಧಿಕಾರಿಗಳು ದಾಳಿ ನಡೆಸಿದಾಗ, 2 ಮನೆಗಳು, ಮಂಗಳೂರು ಹಾಗೂ ಬೆಂಗಳೂರು ನಗರದಲ್ಲಿ 5 ಗುಂಟೆ ವಿಸ್ತೀರ್ಣದ 2 ನಿವೇಶನಗಳು ಒಳಗೊಂಡಂತೆ ಒಟ್ಟು 4 ನಿವೇಶನಗಳು, 276 ಗ್ರಾಂ ಚಿನ್ನ, 3,700 ಗ್ರಾಂ ಬೆಳ್ಳಿ, 2 ಕಾರು, 2 ಬೈಕ್ 10.59 ಲಕ್ಷ ನಗದು, 20 ಲಕ್ಷ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ.

ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ಗಂಗಯ್ಯ ಮನೆ ಮೇಲೆ ದಾಳಿ ನಡೆಸಿದಾಗ, 1 ಮನೆ, 4 ನಿವೇಶನಗಳು, 4.36 ಎಕರೆ ಕೃಷಿ ಜಮೀನು, 0.5ಎಕರೆ ಕೈಗಾರಿಕಾಭಿವೃದ್ದಿ ಭೂಮಿ, 220 ಗ್ರಾಂ ಚಿನ್ನ, 670 ಬೆಳ್ಳಿ ಗ್ರಾಂ, ಒಂದು ಕಾರು, ಬೈಕ್, 64 ಸಾವಿರ ನಗದು, 15 ಲಕ್ಷ ಗೃಹೋಪಯೋಗಿ ವಸ್ತುಗಳು ಕಂಡು ಬಂದಿವೆ.

ಅರಣ್ಯ ಇಲಾಖೆಯ ಚಿಕ್ಕಮಗಳೂರು ಎಸಿಎಫ್ ಕೆ.ಎನ್.ರಂಗಸ್ವಾಮಿ ಬಳಿ, 1 ವಾಸದ ಮನೆ, ಕೊಪ್ಪಳ ತಾಲೂಕಿನಲ್ಲಿ 6 ಎಕರೆ ಕೃಷಿ ಭೂಮಿ, 585 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ, ಎರಡು ಕಾರು, 2.53 ಲಕ್ಷ ನಗದು, 3 ಲಕ್ಷ ಗೃಹೋಪಯೋಗಿ ವಸ್ತುಗಳಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

ಜು.17ರಂದು ಮೂವರು ಸರಕಾರಿ ಅಧಿಕಾರಿಗಳಿಗೆ ಸಂಬಂಧಪಟ್ಟಂತೆ ರಾಜ್ಯದ ಎಂಟು ಸ್ಥಳಗಳಲ್ಲಿ ಏಕಾಏಕಿ ಎಸಿಬಿ ತನಿಖಾಧಿಕಾರಿಗಳು ನಡೆಸಿದ್ದರು. ಪ್ರಕರಣ ಸಂಬಂಧ ತನಿಖೆ ಹಾಗೂ ದಾಖಲೆಗಳ ಪರಿಶೀಲನಾ ಕಾರ್ಯ ಮುಂದುವರೆದಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...