ಅಲ್ ಜುಬೈಲ್: ಇಂಡಿಯನ್ ಸೋಶಿಯಲ್ ಫೋರಮ್ ನಿಂದ ಬೃಹತ್ ಇಫ್ತಾರ್ ಸಂಗಮ

Source: isc jubail | By Arshad Koppa | Published on 20th June 2017, 6:50 AM | Gulf News | Special Report |

ಜುಬೈಲ್, ಜೂನ್ ೧೪ : ಸೌದಿ ಅರೇಬಿಯಾದಲ್ಲಿ ಅನಿವಾಸಿ ಭಾರತೀಯರ  ಸಾಮಾಜಿಕ ಸೇವೆಯಲ್ಲಿ  ಮಂಚೂಣಿಯಲ್ಲಿರುವ ಇಂಡಿಯನ್ ಸೋಶಿಯಲ್ ಫೋರಮ್ ಈಸ್ಟರ್ನ್ ಪ್ರೊವಿನ್ಸ್ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ  ಬೃಹತ್ ಫ್ಯಾಮಿಲಿ ಇಫ್ತಾರ್ ಕೂಟವನ್ನು ಜುಬೈಲ್ ನ ಮರಾಫಿಕ್ ಬೀಚ್ ಕ್ಯಾಂಪಿನಲ್ಲಿ ಆಯೋಜಿಸಲಾಗಿತ್ತು. 


ಇಂಡಿಯಾ ಫ್ರಟೆರ್ನಿಟಿ  ಫೋರಮ್ ದೆಹಲಿ ರಾಜ್ಯ ಸಮಿತಿ ಸದಸ್ಯ ಮುಹಮ್ಮದ್ ಹಕೀಮ್ ಅವರು ರಮದಾನ್ ಸಂದೇಶ  ಪ್ರವಚನವನ್ನು ನೀಡುತ್ತಾ ,  ರಂಝಾನ್ ಮಹತ್ವ ಹಾಗೂ  ಜಗತ್ತಿನಾದ್ಯಂತ ಮುಸ್ಲಿಮರ ಪ್ರಸಕ್ತ ಪರಿಸ್ಥಿತಿಯ  ಬಗ್ಗೆ ನೆನಪಿಸಿ ನಮ್ಮ ಬಾಧ್ಯತೆಗಳ ಬಗ್ಗೆ ವಿವರಿಸಿದರು. ಇಂಡಿಯನ್ ಸೋಶಿಯಲ್ ಫೋರಮ್ ಜುಬೈಲ್  ತೆಲಂಗಾಣ ಕಾರ್ಯದರ್ಶಿ ಸಾದಿಕ್ ಹಾಗು ಇಂಡಿಯನ್ ಸೋಶಿಯಲ್ ಫೋರಮ್ ಜುಬೈಲ್ ಕರ್ನಾಟಕ  ಬ್ರಾಂಚ್ ಸಮಿತಿ ಅಧ್ಯಕ್ಷ  ಮುಹಮ್ಮದ್ ಶಮೀರ್  ಉಪಸ್ಥಿತರಿದ್ದರು. 
ಬೃಹತ್ ಸಂಖೈಯಲ್ಲಿ ಅನಿವಾಸಿ ಭಾರತೀಯರು ಈ ಇಫ್ತಾರ್  ಸಂಗಮದಲ್ಲಿ ಭಾಗವಹಿಸಿದ್ದರು.ಮುಹಮ್ಮದ್ ಶಮೀರ್ ಸ್ವಾಗತಿಸಿ, ಪ್ರಸ್ಥಾವಿಕ ಬಾಷಣ ಮಾಡಿದರು. ಮಾಸ್ಟರ್ ಸುಲೈಮಾನ್  ಕಿರಾಅತ್ ಪಠಿಸಿದರು. ಕಾರ್ಯಕ್ರಮ ನಿರ್ವಹಿಸಿದ ಇರ್ಷಾದ್ ರವರು ನೆರೆದಿದ್ದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

Read These Next

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...