ಶ್ರೀನಿವಾಸಪುರ: ಶಾಂತಿಯುತ ಸಹಬಾಳ್ವೆಗೆ ಅಂಬೇಡ್ಕರ್ ಮಾರ್ಗ ಒಳಿತು. ಅವರು ನೀಡಿರುವ ಸಂವಿಧಾನ ಮಾನವತಾ ವಾದದ ಪ್ರತೀಕ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಹೇಳಿದರು.
ಪಟ್ಟಣದ ಡಾ. ಬಿ.ಆರ್.ಅಬೇಡ್ಕರ್ ಉದ್ಯಾನದಲ್ಲಿ ಬುಧವಾರ ಏರ್ಪಡಿಸಿದ್ದ ಅಂಬೇಡ್ಕರ್ ಅವರ ಪರಿನಿರ್ವಾಣ ಸಮಾರಂಭಲ್ಲಿ ಬಾಬಾ ಸಾಹೇಬ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾನಾಡಿ, ಇಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಸಮಾಜದಲ್ಲಿ ತಲೆಯೆತ್ತಿ ನಿಲ್ಲಲು ಸಾದ್ಯವಾದದ್ದು, ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದದಿಂದ ಎಂಬುದನ್ನು ಮರೆಯಬಾರದು ಎಂದು ಹೇಳಿದರು.
ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜಣ್ಣ ಮಾತನಾಡಿ, ಡಾ. ಬಿ.ಆರ್ಅಂಬೇಡ್ಕರ್ ಅವರಿಗೆ ಬಡವರ ಬವಣೆ ಗೊತ್ತಿತ್ತು. ಆದ್ಧರಿಂದಲೇ ಬಡವರ ಹಾಗೂ ತುಳಿತಕ್ಕೆ ಒಳಗಾದ ಜನರ ಅಭಿವೃದ್ಧಿಗೆ ಪೂರಕವಾದ ಕಾನೂನು ರಚಿಸಿದರು. ಸಮಾಜದ ಎಲ್ಲ ವರ್ಗದ ಜನರ ಹಿತ ರಕ್ಷಣೆ ಸಂವಿಧಾನದ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.
ನಾವು ಸಂವಿಧಾನಬದ್ಧ ಹಕ್ಕುಗಳನ್ನು ಅನುಭವಿಸುತ್ತಲೆ, ಅದು ನಿರ್ದೇಶಿಸುವ ಕರ್ತವ್ಯಗಳನ್ನು ನಿರ್ವಹಿಸಬೇಕು. ಸಮಾಜದ ನಡೆ ಸಂವಿಧಾನದ ಕಡೆ ಇರಬೇಕು. ಅದಕ್ಕೆ ಭಿನ್ನವಾದ ನಡೆಯಿಂದ ಸಮಾಜದ ಅಭಿವೃದ್ದಿ ಹಾಗೂ ಸಾಮಾಜಿಕ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ಹೇಳಿದರು.
ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಎಂ.ವೆಂಕಟರಾಮಪ್ಪ, ರಾಜಸ್ವ ನಿರೀಕ್ಷಕ ಮುನಿರೆಡ್ಡಿ, ಗ್ರಾಮ ಲೆಕ್ಕಾಧಿಕಾರಿ ಶೇಖರ್, ದಲಿತ ಮುಖಂಡರಾದ ನಾರಾಯಣಸ್ವಾಮಿ, ಸೀತಪ್ಪ, ಆಂಜನಪ್ಪ, ಇದ್ದರು.