ಅರಣ್ಯ ಇಲಾಖೆಯಿಂದ 85 ಸಾವಿರ ರೂ ಮೌಲ್ಯದ ಅಕ್ರಮ ಕಟ್ಟಿಗೆ ವಶ 

Source: sonews | By Staff Correspondent | Published on 6th October 2018, 4:59 PM | Coastal News | Incidents | Don't Miss |

ಮುಂಡಗೋಡ : ಮನೆಯೊಂದರಲ್ಲಿ ಅಕ್ರಮವಾಗಿ ಸಾಗವಾನಿ ಕಟ್ಟಿಗೆಯನ್ನು ದಾಸ್ತಾನು ಇಟ್ಟ ಖಚಿತ ಮಾಹಿತ ಪಡೆದ ಅರಣ್ಯ ಇಲಾಖೆ ಶುಕ್ರವಾರ ದಾಳಿ ನಡೆಸಿ  ಆರೋಪಿಗಳ ಸಮೇತ ಸುಮಾರು 85 ಸಾವಿರ ರೂ ಮೌಲ್ಯದ ಕಟ್ಟಿಗೆ ವಶಪಡಿಸಿಕೊಂಡಿದ್ದಾರೆ.

ತಾಲೂಕಿನ ಚವಡಳ್ಳಿ ಗ್ರಾ.ಪಂ ವ್ಯಾಪ್ತಿಯ ಬ್ಯಾನಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬ್ಯಾನಳ್ಳಿ ಗ್ರಾಮದ ಸಿದ್ದು ಲಾಂಬೂರೆ ಮನೆಯಲ್ಲಿ ಅಕ್ರಮವಾಗಿ ಬೆಲೆಬಾಳುವ ಸಾಗವಾನಿ ತುಂಡುಗಳನ್ನು ಕಡಿದು ದಾಸ್ತಾನು ಇಟ್ಟಿದ್ದ ಎನ್ನಲಾಗಿದೆ. ಈ ಕೃತ್ಯಕ್ಕೆ ಸಂಬಂದ ಪಟ್ಟ ಸಿದ್ದು ಜಾನು ಲಾಂಬುರೆ, ಕ್ಯಾಸನಕೇರಿಯ ತುಕಾರಾಮ ಕಳಂತ್ರಿ ಮತ್ತು ಕೃಷ್ಣಾ ಕಳಂತ್ರಿ ಬಂದಿತ ಆರೋಪಿಗಳಾಗಿದ್ದಾರೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ ಜಿ.ಆರ್. ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ ಸುರೇಶ ಕುಳ್ಳೋಳ್ಳಿ ತಂಡ ದಾಳಿ ನಡೆಸಿ ತುಂಡುಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯಚರಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಫಕ್ಕೀರೇಶ ಸುಣಗಾರ, ಅರುಣಕುಮಾರ ಕಾಶಿ,  ಎಲ್.ಆರ್. ನಾಯ್ಕ, ಶ್ರೀಧರ ಭಜಂತ್ರಿ, ಎಲ್.ವಾಯ್.ಹಮಾನಿ, ದೇವರಾಜ ಆಡಿನ್, ಮಂಜು, ಶಿವಪ್ಪಾ, ಇತರ ಸಿಬ್ಬಂದಿಗಳು ಭಾಗವಹಿಸಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...