ದೌರ್ಜನ್ಯ ಪ್ರತಿಬಂಧ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಅರ್ಜಿ ಆಹ್ವಾನ
ಕಾರವಾರ: ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ(ದೌರ್ಜನ್ಯ ಪ್ರತಿಬಂಧ) ನಿಯಮಗಳ (1995) ರಡಿ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ರಚನೆ ಸಂಬಂಧಟ್ಟಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ 5 ಜನ, ಹಾಗೂ ಸರ್ಕಾರೇತರ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿರುವ ಇತರೆ ವರ್ಗದ 3 ಜನ ಅಧಿಕಾರೇತರ ಸದಸ್ಯರನ್ನು ಅರ್ಹತೆ ಆಧಾರದ ಮೇಲೆ 3 ವರ್ಷಗಳ ಅವಧಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿವುಳ್ಳವರು ಸಂಬಂಧಪಟ್ಟ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗಳಲ್ಲಿ ಅರ್ಜಿಯನ್ನು ಪಡೆದು ಜೂನ್ 30 ರೊಳಗೆ ಸಲ್ಲಿಸಬಹುದಾಗಿರುತ್ತದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.