ಜೀವನದ ಮೌಲ್ಯಗಳು ಕುಸಿಯುತ್ತಿರುವ ಇಂದಿನ ಆಧುನಿಕ ಜಗತ್ತಿನಲ್ಲಿ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ, ಯುವಜನರಲ್ಲಿ ಹಾಗೂ ಸಾರ್ವಜನಿಕರಲ್ಲಿ ಬಿತ್ತುವ ಉದ್ದೇಶದಿಂದ ಗಾಂಧೀ ರಿಸರ್ವ ಫೌಂಡೇಶನ್ ಜಲಗಾಂವ್ ಇವರು “ಗಾಂಧೀ ವಿಚಾರ ಸಂಸ್ಕಾರ ಪರೀಕ್ಷೆ”ಯನ್ನು ದೇಶದಾದ್ಯಂತ ನಡೆಸುತ್ತಿದ್ದಾರೆ, ಕರ್ನಾಟಕದಲ್ಲಿ ಇದರ ಸಂಯೋಜನೆಯನ್ನು ಬೆಂಗಳೂರಿನ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಸೇವಾ ಯೋಜನೆ , ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಹಾಗೂ ಅಪ್ನಾದೇಶ ಅಸೋಸೊಯೇಶನ್ ಸಂಸ್ಥೆಗಳು ವಹಿಸಿಕೊಂಡಿವೆ.
ಹಿರಿಯ ಪ್ರಾಥಮಿಕ ಪ್ರೌಡ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಒಂದು ಹಂತದಲ್ಲಿ ಹಾಗೂ ಡಿಪ್ಲೊಮಾ , ಪದವಿ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಹಂತದಲ್ಲಿ ಈ ಪರೀಕ್ಷೆಯನ್ನು ನಡೆಸಲಾಗುವುದು.
ಈ ಪರೀಕ್ಷೆಯು ತಾಲ್ಲೂಕು ಜಿಲ್ಲೆ, ರಾಜ್ಯ ಮಟ್ಟದ ಹಂತದಲ್ಲಿ ನಡೆಯಲಿದೆ, ಮೊದಲಿಗೆ ತಾಲೂಕಾ ಹಂತದಲ್ಲಿ ಹಿರಿಯ ಪ್ರಾಥಮಿಕ 5 ನೇ ತರಗತಿಯಿಂದ 7 ನೇ ತರಗತಿಯವರಿಗೆ “ನಮ್ಮ ಗಾಂಧಿ ತಾತ ” ಪುಸ್ತಕವನ್ನು ರೂ.20/-ನೋಂದಣಿ ಶುಲ್ಕದೊಂದಿಗೆ ನೀಡಲಾಗುವುದು.
8 ನೇ ತರಗತಿಯಿಂದ 12 ನೇ ತರಗತಿಯವರಿಗೆ “ನನ್ನ ಜೀವನ ಕತೆ”ಪುಸ್ತಕವನ್ನು ರೂ.30/- ನೋಂದಣಿ ಶುಲ್ಕದೊಂದಿಗೆ ನೀಡಲಾಗುವುದು.
ಈ ಪರೀಕ್ಷೆಗಾಗಿ ನೊಂದಾಯಿಸಿಕೊಳ್ಳಲು ಶಾಲೆ, ಕಾಲೇಜುಗಳಿಂದ ಮುಖ್ಯೋಪಾದ್ಯಾಯರು, ಪ್ರಾಚಾರ್ಯರ ಮೂಲಕ ಆಸಕ್ತಿ ಇರುವ ವಿದ್ಯಾರ್ಥಿಗಳು ನೊಂದಣ ಫಿಯನ್ನು ದಿನಾಂಕ :-10/12/2016 ಶನಿವಾರದೊಳಗೆ ಸಲ್ಲಿಸಿದರೆ ಪರೀಕ್ಷೆಗೆ ಸಂಬಂಧಿಸಿದ ವಿದ್ಯಾರ್ಥಿಗಳಿಗೆ ಅವರ ಮಟ್ಟಕ್ಕೆ ಹೊಂದುವ ಗಾಂಧೀಜಿಯವರನ್ನು ಕುರಿತ ಪುಸ್ತಕ ಒದಗಿಸಲಾಗುವುದು. ಪುಸ್ತಕದ ಬೆಲೆಯನ್ನು ಮಾತ್ರ ನೊಂದಣ ಶುಲ್ಕವಾಗಿ ಸಂಗ್ರಹಿಸಲಾಗುತ್ತದೆ. ಭಟ್ಕಳ ತಾಲೂಕಿನಲ್ಲಿ ಕನಿಷ್ಠ ನೂರು ವಿದ್ಯಾರ್ಥಿಗಳಿಗೆ ಒಂದು ಪರೀಕ್ಷೆ ಕೇಂದ್ರ ತೆರೆಯಲಾಗುವುದು. ವಿದ್ಯಾರ್ಥಿಗಳು ಆ ಪುಸ್ತಕವನ್ನು ಓದಿ ನಿಗದಿಪಡಿಸಿದ 21 ಜನವರಿ 2017 ರಂದು ಪರೀಕ್ಷೆಯನ್ನು ನಡೆಸಲಾಗುವುದು.
ಪರೀಕ್ಷೆಯಲ್ಲಿ ಪಾಸಾದವರಿಗೆ ಪ್ರಮಾಣ ಪತ್ರ ಜೊತೆಗೆ ಕೇಂದ್ರಕ್ಕೆ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಥಮ , ದ್ವಿತೀಯ , ತೃತೀಯ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ಹಾಗೂ ಪರೀಕ್ಷೆಗೆ ಕುಳಿತ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಪರೀಕ್ಷೆಯು ಕನ್ನಡ, ಇಂಗ್ಲೀಷ ಹಾಗೂ ಹಿಂದಿ ಭಾಷೆಗಳಲ್ಲಿ ಬರೆಯಬಹುದು.
ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಅಹ್ವಾನಿಸಿ ಗೌರವಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಹಾಗೂ ಜಿಲ್ಲಾ ಸಂಚಾಲಕರಾದ ಕೆ.ಮರಿಸ್ವಾಮಿ (9448235284) ಇವರನ್ನು ಸಂಪರ್ಕಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Read These Next
ಶ್ರೀನಿವಾಸಪುರ: ನವೀಕರಣಗೊಂಡ ಪೊಲೀಸ್ ಠಾಣೆ ಉದ್ಘಾಟನೆ ಹಾಗೂ ಸನ್ಮಾನ ಸಮಾರಂಭ
ಠಾಣೆಗೆ ಬರುವ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಈ ವ್ಯಾಪ್ತಿಯ ನೀರಿಕ್ಷಕ ಹಾಗೂ ಸಿಬ್ಬಂದಿ ಮಾಡಿರುವ ಠಾಣಾ ನವೀಕರಣ ಕಾರ್ಯ ಎಲ್ಲರ ...
ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...
ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!
ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!
ನಾಮಫಲಕಗಳಲ್ಲಿ ಶೇ.೬೦% ಕನ್ನಡ ಕಡ್ಡಾಯ; ಹೈಕೋರ್ಟ್ ಮಧ್ಯಂತರ ಆದೇಶ
ಬೆಂಗಳೂರು: ಕನ್ನಡ ನಾಮಫಲಕಗಳಲ್ಲಿ ಶೇ 60ರಷ್ಟು ಕಡ್ಡಾಯ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚಬಾರದು ...
ಸೀಟು ಹಂಚಿಕೆ ವಿವಾದ; ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಬಿರುಕು?
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ತೆಗೆದುಕೊಳ್ಳಲು ನಾನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ...
ಲೋಕಸಭಾ ಚುನಾವಣೆ; ರಾಜ್ಯದಲ್ಲಿ 2 ಹಂತಗಳಲ್ಲಿ ಮತದಾನ
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಎಪ್ರಿಲ್ 26 ಹಾಗೂ ಮೇ 7ರಂದು ತಲಾ 14 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ ...
ಸ್ಪರ್ಧಾತ್ಮಕ ಪರೀಕ್ಷೆ ಪಾಸಾಗಲು ಬಾಲ್ಯದಿಂದಲೇ ರ್ಯಾಂಕ್ ವಿಜೇತರಾಗಿರಬೇಕಾಗಿಲ್ಲ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ನವಾಯತ ಮುಸ್ಲಿಮರಲ್ಲಿ ಲಾಗಾಯ್ತಿನಿಂದಲೂ ವ್ಯಾಪಾರ ಮತ್ತು ಉದ್ಯಮದತ್ತ ಒಲವು ಹೊಂದಿರುವವರೇ ...
ಮಾಧ್ಯಮಗಳು ಯಾರಿಗೆ ಜವಾಬುದಾರರಾಗಿರಬೇಕು?
ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ (ಪಿಸಿಐ) ತನ್ನ ಹೊಣೆಗಾರಿಕೆ ಹಾಗೂ ಉದ್ದೇಶಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕು.
ಸೆ.17 ರಿಂದ ‘ಸೆಕ್ಯುರಿಟಿ ಗಾಡ್ರ್ಸ್’ ಹುದ್ದೆಗಳಿಗಾಗಿ ಸಂದರ್ಶನ ಶಿಬಿರ
ಕಾರವಾರ: ಜಿಲ್ಲಾ ಯೋಜನಾ ಉದ್ಯೋಗ ವಿನಿಮಯ ಕಚೇರಿ, ವತಿಯಿಂದ ಸೆಪ್ಟಂಬರ 17 ರಿಂದ 19ರವರೆಗೆ ಬೆಳಗ್ಗೆ 10.30 ರಿಂದ ಸಂಜೆ 4.30 ರ ವರೆಗೆ ...
ರಾಜ್ಯ ವಿಧಾನಸಭಾ ಚುನಾವಣೆ: ಮತದಾರರ ಪಟ್ಟಿಯಿಂದ ಶೇ.20ರಷ್ಟು ಮುಸ್ಲಿಮರ ಹೆಸರು ನಾಪತ್ತೆ!
ಅಬುಸಲೇಹ್ ಶರೀಫ್ ಭಾರತದಲ್ಲಿ ಮುಸ್ಲಿಂ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಬಗ್ಗೆ ಅಧ್ಯಯನ ನಡೆಸಲು 2005ರಲ್ಲಿ ...
ಕೈಗೆ ರಕ್ತದ ಕಲೆಯೂ ಆಗಿಲ್ಲ, ಕತ್ತಿ ರಕ್ತದಿಂದ ತೊಯ್ದೂ ಇಲ್ಲ… ಈ ಅಪಾಯಕಾರಿ ರಾಜಕಾರಣದ ಕುತಂತ್ರವನ್ನು ಅರಿತು ಮತದಾರರು ಮತ ಚಲಾಯಿಸಬೇಕು..
ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯಾಧ್ಯಕ್ಷ ಮುಹಮ್ಮದ್ ಅತ್ಹರುಲ್ಲಾ ಶರೀಫ್ ಅವರೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಯನ್ನು ...
ವಿವೇಕಾನಂದರ ಹಿಂದೂ ಧರ್ಮಕ್ಕೂ, ಗೋಡ್ಸೆ ಹಿಂದೂ ಧರ್ಮಕ್ಕೂ ಅಜಗಜಾಂತರ ವ್ಯತ್ಯಾಸ -ಡಾ.ರಾಮ್ ಪುನಿಯಾನಿ
ಓದು, ತಲೆ ಬುಡ ಯಾವುದೂ ಇಲ್ಲದೇ ಅಂಗಡಿ ಮುಂಗಟ್ಟಿನಲ್ಲಿ ನಿಂತು ಇತರರನ್ನು ಹೀಯಾಳಿಸಿ ಸುಖ ಪಡುವ, ಕನಸುಗಳಲ್ಲಿಯೇ ತೇಲಾಡಿ ...