ಬೆಂಗಳೂರು: ವಿಷಕಾರಿ ನೊರೆ ತುಂಬಿರುವ ವರ್ತೂರು-ಬೆಳ್ಳಂದೂರು ಕೆರೆಗಳು - ನಾಗರಿಕರಿಂದ ದೂರು ದಾಖಲು.

Source: so english | By Arshad Koppa | Published on 24th December 2016, 9:05 AM | State News | Special Report | Incidents | Don't Miss |

ಬೆಂಗಳೂರು: ಬೆಂಗಳೂರಿನ ವರ್ತೂರು ಮತ್ತು ಬೆಳ್ಳಂದೂರು ಕೆರೆಗಳ ಆಸುಪಾಸಿನಲ್ಲಿರುವ  ಪ್ರದೇಶಗಳ ನಿವಾಸಿಗಳು ಈ ಕೆರೆಗಳನ್ನು ಆವರಿಸಿದ ಬೆಳ್ಳಗಿನ ನೊರೆ ಮತ್ತು ಇದರಿಂದ ಹೊರಸೂಸುತ್ತಿರುವ ವಾಸನೆ ಮತ್ತು ಮಾಲಿನ್ಯ ದ ಕುರಿತು ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. 

ಇತ್ತೀಚಿನ ವರ್ದಾ ಚಂಡಮಾರುತದ ಅಬ್ಬರದ ಬಳಿಕ ಈ ವಿದ್ಯಮಾನ ಕಂಡುಬಂದಿದೆ.

ಬೇಸಿಗೆಯಲ್ಲಿ ಈ ಕೆರೆಗಳು ಒಣಗುವ ಕಾರಣ ಈ ವಿಷ ಇನ್ನಷ್ಟು ಪ್ರಬಲಗೊಳ್ಳಬಹುದು ಎಂದು ನಾಗರಿಕರು ಅನುಮಾನಿಸಿದ್ದಾರೆ. 

"ಸರೋವರ ದುರ್ವಾಸನೆ ಸುಸುತ್ತಿದ್ದು ರೋಗಗಳಿಗೆ ಕಾರಣವಾಗುತ್ತದೆ. ನಾಗರಿಕ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳಲು ಇನ್ನೂ ಮುಂದೆ ಬಂದಿಲ್ಲ, ಆದರೆ ಕೆಲವು ವಿದ್ಯಾರ್ಥಿಗಳು ಮಾತ್ರ ಕೆಲವೊಮ್ಮೆ ಸರೋವರಗಳು ಸ್ವಚ್ಛಗೊಳಿಸಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತದೆ ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದ್ದಾರೆ.

ಈ ಕೆರೆಯಲ್ಲಿ ಮಲಿನ ನೀರನ್ನು ಸಂಸ್ಕರಿಸದೇ ಬಿಟ್ಟ ಕಾರಣ ಕೊಳೆ ಹಾಗೇ ಉಳಿದು ಬಿಡುತ್ತದೆ. ಚಂಡಮಾರುತದ ಕಾರಣ ನೀರು ತುಂಬಿದ್ದರಿಂದ ಈ ಕೊಳೆನೀರು ಉಕ್ಕಿ ರಸ್ತೆಯ ಮೇಲೆಲ್ಲಾ ಹರಿದಿರುವುದು ಕಂಡುಬಂದಿದೆ. 

ರಸ್ತೆಯ ಮೇಲೆಲ್ಲಾ ಚೆಲ್ಲಾಡಿರುವ ಈ ಸೋಪುಭರಿತ ನೀರು ವಾಹನಗಳಿಗೆ ಅತಿ ಅಪಾಯಕಾರಿಯಾಗಿದ್ದು ಜಾರಿ ಬೀಳುವ ಸಾಧ್ಯತೆಯನ್ನು ಅಪಾರವಾಗಿ ಹೆಚ್ಚಿಸಿದೆ. ಈ ಅಪಾಯವನ್ನು ಮನಗಂಡ ಬೆಂಗಳೂರು ನೀರು ಸರಬರಾಜು ಇಲಾಖೆ ಈ ನೊರೆಯ ಮೇಲೆ ನೀರು ಚಿಮುಕಿಸಿ ಜಾರುವಿಕೆಯನ್ನು ತಡೆಗಟ್ಟುವ ಪ್ರಯತ್ನ ನಡೆಸಿದೆ. 

'Whitefield Rising’ ಎಂಬ ಸಂಸ್ಥೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು ತಕ್ಷಣ ಸೂಕ್ತ ಪರಿಹಾರ ಒದಗಿಸಲು ಬಿಬಿಎಂಪಿ. Karnataka State Pollution Control Board (KSPCB), ಹಾಗೂ Karnataka Lake Conservation and Development Authority (KLCDA) ಸಂಸ್ಥೆಗಳಿಗೆ ದೂರು ಸಲ್ಲಿಸಿದೆ.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...