ಬಿಜೆಪಿಯಲ್ಲಿ ಭಿನ್ನಮತ ;ಡಿ.ಎಸ್.ಅರುಣ್ ಗೆ ಟಿಕೇಟ್ ನಿರಾಕರಣೆ

Source: sonews | By Staff Correspondent | Published on 19th November 2017, 8:03 PM | State News | Don't Miss |

ಶಿವಮೊಗ್ಗ: ವಿಧಾನಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ವಿಧಾನಪರಿಷತ್ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಪುತ್ರ ಡಿ.ಎಸ್.ಅರುಣ್‍ಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ಭಾನುವಾರ ಡಿ.ಎಸ್.ಅರುಣ್ ಬೆಂಬಲಿಗರು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪರನ್ನು ಭೇಟಿಯಾಗಿ ಮನವಿ ಅರ್ಪಿಸಿದ್ದಾರೆ.

ನಗರದ ಮಲ್ಲೇಶ್ವರಂ ಬಡಾವಣೆಯಲ್ಲಿರುವ ನಿವಾಸದಲ್ಲಿ ಕೆ.ಎಸ್.ಈಶ್ವರಪ್ಪರನ್ನು ಬೆಂಬಲಿಗರು ಭೇಟಿಯಾಗಿ ಚರ್ಚೆ ನಡೆಸಿದರು. 'ಸರಳ - ಸಜ್ಜನ ವ್ಯಕ್ತಿತ್ವದ ಡಿ.ಎಸ್.ಅರುಣ್‍ಗೆ ಟಿಕೆಟ್ ಸಿಗುವ ವಿಶ್ವಾಸವಿತ್ತು. ಆದರೆ ಅವರಿಗೆ ಟಿಕೆಟ್ ನಿರಾಕರಣೆ ಮಾಡಿರುವುದು ತೀವ್ರ ನೋವುಂಟು ಮಾಡಿದೆ. ಡಿ.ಎಸ್.ಅರುಣ್‍ಗೆ ಟಿಕೆಟ್ ನೀಡದಿದ್ದರೆ ನಾವುಗಳ್ಯಾರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ' ಎಂದು ಬೆಂಬಲಿಗರು ತಿಳಿಸಿದ್ದಾರೆ ಎನ್ನಲಾಗಿದೆ. 

ಅಹವಾಲು ಆಲಿಸಿದ ನಂತರ ಕೆ.ಎಸ್.ಈಶ್ವರಪ್ಪ ಮಾತನಾಡಿ, 'ಈ ನಿಟ್ಟಿನಲ್ಲಿ ತಾವು ಏನೂ ಮಾಡಲಾಗದ ಸ್ಥಿತಿಯಲ್ಲಿದ್ದೆನೆ. ಪಕ್ಷದ ಕೋರ್ ಕಮಿಟಿಯಲ್ಲಿ ಈ ಬಗ್ಗೆ ನಿರ್ಧಾರವಾಗಿದೆ. ಅದರಂತೆ ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಅಭ್ಯರ್ಥಿ ಘೋಷಣೆ ಮಾಡಿದೆ. ಈ ಹಂತದಲ್ಲಿ ಅಭ್ಯರ್ಥಿ ಬದಲಾವಣೆ ಅಸಾಧ್ಯವಾಗಿದೆ' ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. 

'ಈ ಕುರಿತಂತೆ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿ. ಅವರೇ ಏನಾದರೂ ನಿರ್ಧಾರ ಕೈಗೊಳ್ಳಬಹುದು. ತಮ್ಮ ಹಂತದಲ್ಲಿ ಏನೂ ಮಾಡಲಾಗುವುದಿಲ್ಲ. ಈ ವಿಚಾರದಲ್ಲಿ ಪಕ್ಷದ ಇತರೆ ಮುಖಂಡರನ್ನು ಭೇಟಿಯಾದರೂ ಯಾವುದೇ ಫಲಪ್ರದವಾಗುವುದಿಲ್ಲ' ಎಂದು ಬೆಂಬಲಿಗರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. 

ಕೆ.ಎಸ್.ಈಶ್ವರಪ್ಪರ ಸೂಚನೆಯ ಹಿನ್ನೆಲೆಯಲ್ಲಿ ಡಿ.ಎಸ್.ಅರುಣ್ ಬೆಂಬಲಿಗರು ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ಭೇಟಿಯ ವೇಳೆ ಮುಖಂಡರಾದ ಮುರುಳಿ, ಅರವಿಂದ್, ಅಶ್ವಥ್, ಸುರೇಶ್, ಅಶ್ವಥ್ ನಾರಾಯಣ್, ಶಶಿಧರ್ ಸೇರಿದಂತೆ ಸುಮಾರು 70 ಕ್ಕೂ ಅಧಿಕ ಬೆಂಬಲಿಗರಿದ್ದರು

ಪ್ರತಿಭಟಿಸಿದ್ದರು: ನೈರುತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್‍ಗೆ ಟಿಕೆಟ್ ನೀಡಿದ್ದರಿಂದ ಬೇಸರಗೊಂಡಿದ್ದ ಡಿ.ಎಸ್.ಅರುಣ್ ಬೆಂಬಲಿಗರು ಶುಕ್ರವಾರ ಪ್ರತಿಭಟನೆ ನಡೆಸಿದ್ದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾವಣೆಗೆ ತಾವು ಸಲ್ಲಿಸಿರುವ ಅರ್ಜಿ ಮಾನ್ಯ ಮಾಡದಂತೆ ಸುಮಾರು 50 ಜನರ ಸಹಿಯನ್ನೊಳಗೊಂಡ ಮನವಿ ಪತ್ರ ಅರ್ಪಿಸಿದ್ದರು. 

"ಸ್ವಜನ ಪಕ್ಷಪಾತ, ಜಾತಿ ರಾಜಕಾರಣದ ಕಾರಣದಿಂದಲೇ ಡಿ.ಎಸ್.ಅರುಣ್‍ಗೆ ಬಿಜೆಪಿ ಪಕ್ಷ ಟಿಕೆಟ್ ನಿರಾಕರಿಸಿದೆ. ಬಿಜೆಪಿ ಪಕ್ಷದ ಈ ವರ್ತನೆ ಬೇಸರ ತರಿಸಿದೆ. ನಾವುಗಳೆಲ್ಲರೂ ಮೊದಲಿನಿಂದ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿಕೊಂಡು ಬಂದಿದ್ದೆವೆ. ಆದರೆ ಡಿ.ಎಸ್.ಅರುಣ್‍ಗೆ ಟಿಕೆಟ್ ನಿರಾಕರಣೆ ಮಾಡಿದ್ದರಿಂದ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲ. ಈ ಕಾರಣದಿಂದಲೇ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಸೇರ್ಪಡೆ ಮಾಡದಂತೆ ಜಿಲ್ಲಾಡಳಿತಕ್ಕೆ ಮನವಿ ಅರ್ಪಿಸಿದ್ದೆವೆ" ಎಂದು ಬೆಂಬಲಿಗರು ಸುದ್ದಿಗಾರರಿಗೆ ತಿಳಿಸಿದ್ದರು. 

'ಅಸಹಾಯಕತೆ ವ್ಯಕ್ತಪಡಿಸಿದರು' : ಬೆಂಬಲಿಗ ಮುರುಳಿ
'ಡಿ.ಎಸ್.ಅರುಣ್‍ಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ಕೆ.ಎಸ್.ಈಶ್ವರಪ್ಪರವರನ್ನು ಭೇಟಿಯಾಗಿ ಒತ್ತಾಯಿಸಲಾಯಿತು. ಆದರೆ ಅವರು ಅಸಹಾಯಕತೆ ವ್ಯಕ್ತಪಡಿಸಿದರು. ಬಿ.ಎಸ್.ಯಡಿಯೂರಪ್ಪರೊಂದಿಗೆ ಚರ್ಚೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿ ಡಿ.ಎಸ್.ಅರುಣ್‍ಗೆ ಟಿಕೆಟ್ ನೀಡುವಂತೆ ಒತ್ತಾಯಿಸಲಾಗುವುದು' ಎಂದು ಡಿ.ಎಸ್.ಅರುಣ್ ಬೆಂಬಲಿಗ ಮುರುಳಿ ಎಂಬುವರು ತಿಳಿಸಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...