ಯಶಸ್ವಿ ಮುಸ್ಲಿಮ್ ಸಬಲಿಕರಣ ಸಮಾವೇಶ

Source: S O News service | By Staff Correspondent | Published on 27th November 2016, 8:50 PM | State News | National News | Don't Miss |

ಬೆಂಗಳೂರು: ಕರ್ನಾಟಕ ಮುಸ್ಲಿಮ್ ಸಮನ್ಸಯ ಸಮಿತಿಯು ರವಿವಾರ ಬೆಂಗಳೂರಿನ ಪುರಭವನದಲ್ಲಿ ಆಯೋಜಿಸಿದ್ದ ’ಮುಸ್ಲಿಮ ಸಬಲೀಕರಣ ಸಮಾವೇಶ ಯಶಸ್ವಿಯಾಗಿ ಜರಗಿತು. 

ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ದಿಲ್ಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಜಿಂದರ್ ಸಿಂಗ್ ಸಾಚಾರ್, ಮುಸ್ಲಿಮರಿಗೆ ಸಾಮಾಜಿಕ, ಶೈಕ್ಷಣಿಕ, ಉದ್ಯೋಗ ಮತ್ತು ರಾಜಕೀಯ ಮೀಸಲಾತಿ ಕಲ್ಪಿಸುವ ಜೊತೆಗೆ ಅಭಿವೃದ್ಧಿಗೆ ಪೂರಕವಾಗಿರುವ ‘ಸಾಚಾರ್ ವರದಿ’ಯನ್ನು ಜಾತ್ಯಾತೀತ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿದರು.

ಕೇಂದ್ರ ಸರಕಾರ ಉನ್ನತ ಮಟ್ಟದ ಸಮಿತಿಯೊಂದನ್ನು ನೇಮಿಸಿ ದೇಶದ ಮುಸ್ಲಿಮರ ಆರ್ಥಿಕ, ಸಾಮಾಜಿಕ, ರಾಜಕೀಯ, ಧಾರ್ಮಿಕ ಸ್ಥಿತಿಗತಿ ಬಗ್ಗೆ ಅಧ್ಯಯನ ನಡೆಸಿ ವರದಿಯನ್ನು ಮಂಡಿಸುವಂತೆ ಅಧಿಕಾರ ನೀಡಿತ್ತು. ಅದರಂತೆ 2006 ರಲ್ಲಿ ಸಮಿತಿಯು ವರದಿಯನ್ನು ನೀಡಲಾಗಿದೆ. ಆದರೆ, ಇಲ್ಲಿಯವರೆಗೆ ವರದಿ ಅನುಷ್ಠಾನಗೊಂಡಿಲ್ಲ. ಅಲ್ಲದೆ, ಇದು ಕೇಂದ್ರದಲ್ಲಿಯೇ ಅನುಷ್ಠಾನಗೊಳಿಸಬೇಕಿಲ್ಲ. ಬದಲಿಗೆ ಜಾತ್ಯತೀತ ಪಕ್ಷಗಳು ಅಧಿಕಾರದಲ್ಲಿರುವ ಯಾವುದೇ ರಾಜ್ಯದಲ್ಲಿ ಇದನ್ನು ಅನುಷ್ಠಾನಗೊಳಿಸ ಬಹುದಾಗಿದೆ ಎಂದು ರಾಜಿಂದರ್ ಸಿಂಗ್ ಸಾಚಾರ್ ಹೇಳಿದರು.

ಕೆಲ ರಾಜಕೀಯ ಪಕ್ಷಗಳು ಮುಸ್ಲಿಮರನ್ನು ಮತ ಬ್ಯಾಂಕ್‌ಗಳಾಗಿ ಉಪಯೋಗಿಸುತ್ತಿದ್ದಾರೆ. ಆದರೆ, ಆ ಪಕ್ಷಗಳಿಗೆ ನೈತಿಕವಾಗಿ ಮುಸ್ಲಿಮರ ಬಗ್ಗೆ ಕಾಳಜಿಯಿದ್ದರೆ, ಸಾಚಾರ್ ವರದಿ ಜಾರಿಗೊಳಿಸಲಿ ಎಂದು ಸವಾಲು ಹಾಕಿದ ಅವರು, ದಲಿತ ಸಮುದಾಯಕ್ಕಿಂತ ಮುಸ್ಲಿಮರು ಅತಿ ಹಿಂದುಳಿದಿದ್ದಾರೆ. ಅಲ್ಲದೆ, ಹಲವು ಮಂದಿಗೆ ಇನ್ನೂ ಕನಿಷ್ಠ ಸೌಲಭ್ಯವೇ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೀಸಲಾತಿ ವಂಚನೆ

ಮುಸ್ಲಿಮರು ಯಾವ ಪ್ರದೇಶಗಳಲ್ಲಿ ಹೆಚ್ಚಾಗಿದ್ದರೂ, ಅಂತಹ ಭಾಗಗಳಲ್ಲಿಯೇ ಮೀಸಲಾತಿ ಜಾರಿಗೊಳಿಸಿ ಇತರೆ ಸಮುದಾಯಗಳಿಗೆ ಅವಕಾಶ ನೀಡಲಾಗಿದೆ ಎಂದ ಅವರು, ಸಾಚಾರ್ ವರದಿಯ ಪ್ರಕಾರ ಮುಸ್ಲಿಮರು ಹೆಚ್ಚಾಗಿರುವ ಪ್ರದೇಶಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶ ನೀಡಿದರೆ, ಲೋಕಸಭೆಗೆ 30ರಿಂದ 40 ಅಭ್ಯರ್ಥಿಗಳು ಆಯ್ಕೆಯಾಗುತ್ತಾರೆ ಎಂದು ನುಡಿದರು.

ಫಿಝಾ ಗ್ರೂಪ್ ನ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಕೆಎಂಸಿಸಿ ಖಜಾಂಚಿ ಬಿ.ಎಂ.ಫಾರೂಖ್ ಮಾತನಾಡಿ, ಮುಸ್ಲಿಮ್ ಜನಾಂಗದ ಪ್ರತಿಯೊಬ್ಬರು ಸಾಚಾರ್ ವರದಿಯನ್ನು ಜಾರಿಗೆ ತರಲು ಹೋರಾಟಕ್ಕೆ ಸನ್ನದ್ಧರಾಗಬೇಕಾಗಿದ್ದು, ಇದಕ್ಕೆ ಬಹುದೊಡ್ಡ ಜನಾಂದೋಲನ ಅಗತ್ಯವಿದೆ ಎಂದು ಹೇಳಿದರು.
 ಮುಸ್ಲಿಮರ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿತಿ ಹಾಗೂ ಈ ಸ್ಥಿತಿಗಳ ಸುಧಾರಣೆಗೆ ಸೂಕ್ತ ಕಾರ್ಯಯೋಜನೆ ರೂಪಿಸಬೇಕು. ಸರಕಾರಿ ನೌಕರಿ ಮತ್ತು ಚುನಾವಣೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕೆಂದು ‘ಸಾಚಾರ್’ ಆಯೋಗ ಶಿಫಾರಸು ಮಾಡಿದೆ. ಆದರೆ, 2005ರಲ್ಲಿ ಆಯೋಗವು ವರದಿಯನ್ನು ಸಲ್ಲಿಸಿದರೂ ಕೇಂದ್ರ ಸರಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದೆ ಮುಸ್ಲಿಮರಿಗೆ ಅನ್ಯಾಯ ಎಸಗಿದೆ ಎಂದು ಕಿಡಿಕಾರಿದರು.

ಸಾಚಾರ್ ವೌಲ್ಯಮಾಪನ ಸಮಿತಿ ಮಾಜಿ ಅಧ್ಯಕ್ಷ, ಜೆಎನ್‌ಯು ನಿವೃತ್ತ ಪ್ರೊ.ಅಮಿತ್ ಕುಂದು ಮಾತನಾಡಿ, ಹಲವು ಸಮೀಕ್ಷೆಗಳ ಪ್ರಕಾರ ಇಂದಿಗೂ ಮುಸ್ಲಿಮರಿಗೆ, ಶಿಕ್ಷಣ, ಸರಕಾರಿ ಆರೋಗ್ಯ ಸೇವೆ ಹಾಗೂ ಕನಿಷ್ಠ ಮೂಲಭೂತ ಸೌಲಭ್ಯಗಳು ದೊರೆತಿಲ್ಲ. ಅಲ್ಲದೆ, ಮುಸ್ಲಿಮರ ಪ್ರಗತಿಗೆ ಹತ್ತು ಹಲವು ವರದಿಗಳಿದ್ದರೂ, ಎಲ್ಲ ಸರಕಾರಗಳು ಅನುಷ್ಠಾನಗೊಳಿಸಲು ಭರವಸೆ ಮಾತ್ರ ನೀಡಿದ್ದರೆ ಹೊರತು, ಕ್ರಮಕ್ಕೆ ಮುಂದಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಅಮೀರ್ ಇ ಶರೀಯತ್‌ನ ವೌಲಾನ ಮುಫ್ತಿ ಆಶ್ರಫ್ ಅಲಿ, ಕೆಎಂಸಿಸಿ ಅಧ್ಯಕ್ಷ, ನಿವೃತ್ತ ಐಎಎಸ್ ಸೈಯದ್ ಝಮೀರ್ ಪಾಷ, ರಾಜ್ಯ ಅಲ್ಪಸಂಖ್ಯಾತರ ಆಯೋಗ ಅಧ್ಯಕ್ಷ ನಸೀರ್ ಅಹ್ಮದ್, ಕೆಎಂಸಿಸಿ ಉಪಾಧ್ಯಕ್ಷ ಸೈಯದ್ ಝೈನುಲ್ ಅಬಿದೀನ್ ತಂಙಲ್, ನಿವೃತ್ತ ಐಎಎಸ್ ಅಧಿಕಾರಿ ಸನಾವುಲ್ಲಾ, ಪತ್ರಕರ್ತ ಬಿ.ಎಂ.ಹನೀಫ್ ಸೇರಿ ಪ್ರಮುಖರು ಹಾಜರಿದ್ದರು.

ಟಿಪ್ಪು ವಿರುದ್ಧ ಆರೋಪ ಸರಿಯಲ್ಲ

‘ಮೈಸೂರು ಹುಲಿ ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಸ್ವಾತಂತ್ರಕ್ಕಾಗಿ ಹೋರಾಟ ಮಾಡಿ, ತನ್ನ ಪ್ರಾಣ ಮತ್ತು ಮಕ್ಕಳನ್ನೆ ಕಳೆದುಕೊಂಡ.ಇದನ್ನು ಬ್ರಿಟಿಷರೇ ಹೇಳಿದ್ದಾರೆ. ಆದರೆ, ಇದೀಗ ಟಿಪ್ಪು ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ’

 -ರಾಜಿಂದರ್ ಸಿಂಗ್ ಸಾಚಾರ್, ದಿಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...