ಬಸವಣ್ಣ ನನ್ನ ಯಕ್ಕಡಕ್ಕೆ ಸಮ ಎಂದು ಪೋಸ್ಟ್ ಹಾಕಿದ ಕಿಡಿಗೇಡಿ: ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ

Source: sonews | By Staff Correspondent | Published on 19th May 2018, 11:59 PM | State News | Don't Miss |

ಬೆಂಗಳೂರು: ಕಿಡಿಗೇಡಿಯೊಬ್ಬ ಸಾಮಾಜಿಕ ಹರಿಕಾರ ಬಸವಣ್ಣರ ವಿರುದ್ಧ ಅವಹೇಳನಕಾರಿ ಫೇಸ್ ಬುಕ್ ಪೋಸ್ಟ್ ಹಾಕಿರುವ ಬಗ್ಗೆ ವರದಿಯಾಗಿದೆ.

ಸುರೇಶ್ ಪ್ರಭಾಕರ್ ಎಂಬ ಹೆಸರಿನ ವ್ಯಕ್ತಿ ತನ್ನ ಫೇಸ್ ಬುಕ್ ಪೋಸ್ಟ್ ನಲ್ಲಿ 'ಅಲ್ಪಸಂಖ್ಯಾತ ಲಿಂಗಾಯತರು ನನ್ನ ಎಡಗಾಲಿನ ಎಕ್ಕಡಕ್ಕೆ ಸಮ', ‘ಬಸವ ಧರ್ಮ ಸ್ಥಾಪಕ ಬಸವಣ್ಣ ನನ್ನ ಎಕ್ಕಡಕ್ಕೆ ಸಮ' ಎಂದು ಬರೆದಿದ್ದಾನೆ. ದೇಶ ಧರ್ಮದ ಪ್ರೇಮಿ ಎಂದು ಈತನ ಫೇಸ್ ಬುಕ್ ಪ್ರೊಫೈಲ್ ನಲ್ಲಿ ಬರೆಯಲಾಗಿದ್ದು, ಬೆಂಗಳೂರಿನ ನಿವಾಸಿ ಎಂದು ತೋರಿಸುತ್ತದೆ. ಅಲ್ಲದೆ ಈತ ತನ್ನ ಫೇಸ್ ಬುಕ್ ಖಾತೆಯಲ್ಲಿ ‘ಈ ಬಾರಿ ಬಿಜೆಪಿ ಸರಕಾರ’ ಎನ್ನುವ ಫೋಟೊ ಹಾಕಿಕೊಂಡಿದ್ದಾನೆ.

ಇಷ್ಟೇ ಅಲ್ಲದೆ ಈತನ ಫೇಸ್ಬುಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರನ್ನು ನಿಂದಿಸಿ, ಗಾಂಧಿ ಹಂತಕ ಗೋಡ್ಸೆಯನ್ನು ಹೊಗಳಿ ಕೂಡ ಪೋಸ್ಟ್ ಹಾಕಲಾಗಿದೆ. "ಮಹಾತ್ಮನ ಕೊಂದ ಪುಣ್ಯಾತ್ಮ ಗೋಡ್ಸೆಗೆ ಹುಟ್ಟುಹಬ್ಬದ ಶುಭಾಶಯಗಳು. ನಮ್ಮದು ಗಾಂಧಿ ವಂಶವಲ್ಲ ಗೋಡ್ಸೆ ವಂಶ" ಎಂದು ಬರೆಯಲಾಗಿದೆ. ಸುರೇಶ್ ನ ಈ ಕಿಡಿಗೇಡಿ ಕೃತ್ಯದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈತನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.

 

ಕೃಪೆ:vbnewsonline

Read These Next

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ “ಸಹಾಯವಾಣಿ”

ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ...