ಬಸವಣ್ಣ ನನ್ನ ಯಕ್ಕಡಕ್ಕೆ ಸಮ ಎಂದು ಪೋಸ್ಟ್ ಹಾಕಿದ ಕಿಡಿಗೇಡಿ: ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ

Source: sonews | By Staff Correspondent | Published on 19th May 2018, 11:59 PM | State News | Don't Miss |

ಬೆಂಗಳೂರು: ಕಿಡಿಗೇಡಿಯೊಬ್ಬ ಸಾಮಾಜಿಕ ಹರಿಕಾರ ಬಸವಣ್ಣರ ವಿರುದ್ಧ ಅವಹೇಳನಕಾರಿ ಫೇಸ್ ಬುಕ್ ಪೋಸ್ಟ್ ಹಾಕಿರುವ ಬಗ್ಗೆ ವರದಿಯಾಗಿದೆ.

ಸುರೇಶ್ ಪ್ರಭಾಕರ್ ಎಂಬ ಹೆಸರಿನ ವ್ಯಕ್ತಿ ತನ್ನ ಫೇಸ್ ಬುಕ್ ಪೋಸ್ಟ್ ನಲ್ಲಿ 'ಅಲ್ಪಸಂಖ್ಯಾತ ಲಿಂಗಾಯತರು ನನ್ನ ಎಡಗಾಲಿನ ಎಕ್ಕಡಕ್ಕೆ ಸಮ', ‘ಬಸವ ಧರ್ಮ ಸ್ಥಾಪಕ ಬಸವಣ್ಣ ನನ್ನ ಎಕ್ಕಡಕ್ಕೆ ಸಮ' ಎಂದು ಬರೆದಿದ್ದಾನೆ. ದೇಶ ಧರ್ಮದ ಪ್ರೇಮಿ ಎಂದು ಈತನ ಫೇಸ್ ಬುಕ್ ಪ್ರೊಫೈಲ್ ನಲ್ಲಿ ಬರೆಯಲಾಗಿದ್ದು, ಬೆಂಗಳೂರಿನ ನಿವಾಸಿ ಎಂದು ತೋರಿಸುತ್ತದೆ. ಅಲ್ಲದೆ ಈತ ತನ್ನ ಫೇಸ್ ಬುಕ್ ಖಾತೆಯಲ್ಲಿ ‘ಈ ಬಾರಿ ಬಿಜೆಪಿ ಸರಕಾರ’ ಎನ್ನುವ ಫೋಟೊ ಹಾಕಿಕೊಂಡಿದ್ದಾನೆ.

ಇಷ್ಟೇ ಅಲ್ಲದೆ ಈತನ ಫೇಸ್ಬುಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರನ್ನು ನಿಂದಿಸಿ, ಗಾಂಧಿ ಹಂತಕ ಗೋಡ್ಸೆಯನ್ನು ಹೊಗಳಿ ಕೂಡ ಪೋಸ್ಟ್ ಹಾಕಲಾಗಿದೆ. "ಮಹಾತ್ಮನ ಕೊಂದ ಪುಣ್ಯಾತ್ಮ ಗೋಡ್ಸೆಗೆ ಹುಟ್ಟುಹಬ್ಬದ ಶುಭಾಶಯಗಳು. ನಮ್ಮದು ಗಾಂಧಿ ವಂಶವಲ್ಲ ಗೋಡ್ಸೆ ವಂಶ" ಎಂದು ಬರೆಯಲಾಗಿದೆ. ಸುರೇಶ್ ನ ಈ ಕಿಡಿಗೇಡಿ ಕೃತ್ಯದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈತನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.

 

ಕೃಪೆ:vbnewsonline

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...