ವಿದೇಶದಲ್ಲಿ ವ್ಯಾಸಂಗ ಮಾಡಲು ಶೈಕ್ಷಣ ಕ ಸಾಲ ಪಡೆದು ಅಮೇರಿಕಾಗೆ ತೆರಳುತ್ತಿರುವ ಕರ್ನಾಟಕದ ಯುವಕರು ವಿದ್ಯಾಭ್ಯಾಸದ ನಂತರ ಅಲ್ಲಿಯೇ ಉದ್ಯೋಗ ಕಂಡುಕೊಂಡು ಆ ಮುಖಾಂತರ ಶೈಕ್ಷಣಿಕ ಸಾಲವನ್ನ ತೀರಿಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅಂತಹ ಯುವಕರಿಗೆ ಸ್ಥಳೀಕವಾಗಿ ಕೆಲ ಆಡಳಿತಾತ್ಮಕ ಸಮಸ್ಯೆಗಳಿಂದಾಗಿ ಕೆಲಸಗಳು ದೊರಕಿಸಿಕೊಳ್ಳುವುದು ಕಷ್ಟಸಾಧ್ಯವಾಗುತ್ತಿರುವ ಕುರಿತು ಹೆಚ್ಚು ದೂರುಗಳು ಕೇಳಿಬರುತ್ತಿತ್ತು, ಅದರಲ್ಲೂ ವಿಶೇಷವಾಗಿ ಕಾರ್ಮಿಕ ವೀಸಾ ಸಮಸ್ಯೆ.
ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಡಾ. ಆರತಿ ಕೃಷ್ಣ, ಉಪಾಧ್ಯಕ್ಷರು ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಸರ್ಕಾರ ಇವರು ದಿನಾಂಕ 12-09-2017ರಂದು ಅಮೇರಿಕಾದ ವಿದೇಶಾಂಗ ವ್ಯವಹಾರಗಳ ಅಧ್ಯಕ್ಷರು ಹಾಗೂ ಕಾಂಗ್ರೆಸ್ಮನ್ ಆದ ಶ್ರೀಯುತ ಎಡ್ ರಾಯ್ಸ್ ರವರನ್ನ ಅವರ ಕ್ಯಾಲಿಫೋರ್ನಿಯಾದ ಅಲೆಕ್ಸಾಂಡ್ರಿಯಾ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಅನಿವಾಸಿ ಭಾರತೀಯ/ಕನ್ನಡಿಗ ಯುವಕರ ಸಮಸ್ಯೆಗೆ ಸೂಕ್ತ ಆಡಳಿತಾತ್ಮಕ ಪರಿಹಾರ ಹಾಗೂ ಅನಿವಾಸಿ ಕನ್ನಡಿಗರೊಂದಿಗೆ ವಿವಾಹವಾದ ಸಂಧರ್ಭದಲ್ಲಿ ವಿವಾಹಿತ ಹೆಣ್ಣು ಮಕ್ಕಳಿಗೆ ವೀಸಾವನ್ನು ಶೀಘ್ರಗತಿಯಲ್ಲಿ ನೀಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈ ಸಂಧರ್ಭದಲ್ಲಿ ಅಮೇರಿಕಾದ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಟ್ರಂಪ್ರವರ ಸಲಹೆಗಾರರಾದ ಶ್ರೀಯುತ ಕೆ.ವಿ.ಕುಮಾರ್ ಹಾಗೂ ಅನಿವಾಸಿ ಭಾರತೀಯ ಸಮುದಾಯದ ಇತರೆ ಮುಖಂಡರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.
ಆಪ್ತ ಕಾರ್ಯದರ್ಶಿ,
ಅನಿವಾಸಿ ಭಾರತೀಯ ಸಮಿತಿ, ಕರ್ನಾಟಕ,
ವಿಕಾಸಸೌಧ, ಬೆಂಗಳೂರು
ಕರ್ನಾಟಕ ಸರ್ಕಾರ
ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿ,
ದೂರವಾಣ : 080-22374818
ಅನಿವಾಸಿ ಭಾರತೀಯ ಸಮಿತಿ, ಕರ್ನಾಟಕ,
22035076
ವಿಕಾಸಸೌಧ, ಬೆಂಗಳೂರು.