ಬೆಂಗಳೂರು:ಕಾಂಗ್ರೇಸ್ ಮತ್ತು ಜೆ.ಡಿಎಸ್ ಮೈತ್ರಿಕೋಟ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದ್ದು ಎಚ್.ಡಿ.ಕುಮಾರ್ ಸ್ವಾಮಿ ರಾಜ್ಯದ ೨೫ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯದಲ್ಲಿ ”ಕುಮಾರಪರ್ವ’ ಆರಂಭಗೊಂಡಿದೆ.
ಇದೇ ಸಂದರ್ಭದಲ್ಲಿ ಕರ್ನಾಟಕದ ನೂತನ ಉಪ ಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ ಬುಧವಾರ ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ವಾಲಾ ಇಬ್ಬರಿಗೂ ಪ್ರ ಮಾಣವಚನ ಬೋಧಿಸಿದರು.
ಸಮಾರಂಭದಲ್ಲಿ ಯುಪಿಎ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಎಸ್ ಪಿ ನಾಯಕಿ ಮಾಯಾವತಿ, ಎಸ್ಪಿ ನಾಯಕ ಅಖಿಲೇಶ್ ಯಾದವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕೇರಳ ಸಿಎಂ ಪಿಣರಾಯಿ ವಿಜಯನ್, ಆರ್ ಜೆಡಿ ನಾಯಕ ತೇಜಸ್ವಿ ಯಾದವ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ರಾಮಲಿಂಗಾ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.