ವಿಧಿ ವಿಜ್ಞಾನ ವರದಿಯಲ್ಲಿ ಗೌರಿ ಹಾಗೂ ಕಲಬುರ್ಗಿ ಹತ್ಯೆಯ ಸ್ಪೋಟಕ ಮಾಹಿತಿ ಬಹಿರಂಗ

Source: sonews | By Staff Correspondent | Published on 8th June 2018, 10:54 PM | State News | National News | Special Report | Don't Miss |

ಹೊಸದಿಲ್ಲಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ವಿಚಾರವಾದಿ ಎಂ.ಎಂ. ಕಲುಬುರ್ಗಿ ಅವರನ್ನು 7.65 ಎಂಎಂ ದೇಶೀ ನಿರ್ಮಿತ ಒಂದೇ ಗನ್‌ನಿಂದ ಹತ್ಯೆಗೈಯಲಾಗಿದೆ ಎಂದು ವಿಧಿವಿಜ್ಞಾನ ವರದಿ ಶುಕ್ರವಾರ ತಿಳಿಸಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಪೋಲೀಸರ ಸಿಟ್ ಆರೋಪ ಪಟ್ಟಿಯೊಂದಿಗೆ ಈ ವರದಿ ಲಗತ್ತಿಸಿ ಬೆಂಗಳೂರಿನಲ್ಲಿರುವ ಮೂರನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೆಟ್‌ಗೆ ಸಲ್ಲಿಸಿದೆ.

 ಇದು 2015 ಹಾಗೂ 2017ರಲ್ಲಿ ಸಂಭವಿಸಿದ ಹತ್ಯೆಯ ನಡುವೆ ಸಂಬಂಧ ಇರುವ ಬಗ್ಗೆ ಸಿಟ್ ನೀಡಿದ ಮೊದಲ ಅಧಿಕೃತ ಸೂಚನೆ. ಈ ಎರಡೂ ಹತ್ಯೆಯನ್ನು ಒಂದೇ ಗುಂಪು ಮಾಡಿದೆ. ಕಲುಬುರ್ಗಿ (77) ಅವರನ್ನು ಧಾರವಾಡದಲ್ಲಿ 2015 ಆಗಸ್ಟ್ 30ರಂದು ಹಾಗೂ ಗೌರಿ ಲಂಕೇಶ್ (55) ಅವರನ್ನು ಬೆಂಗಳೂರಿನಲ್ಲಿ 2017 ಸೆಪ್ಟಂಬರ್ 5ರಂದು ಹತ್ಯೆಗೈಯಲಾಗಿತ್ತು ಎಂದು ವರದಿ ಹೇಳಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ಐವರು ಆರೋಪಿಗಳಲ್ಲಿ ಒಬ್ಬನಾಗಿರುವ ಕೆ.ಟಿ. ನವೀನ್ ಕುಮಾರ್ ವಿರುದ್ಧದ ಆರೋಪ ಪಟ್ಟಿಯೊಂದಿಗೆ ವಿಧಿವಿಜ್ಞಾನ ವರದಿ ಲಗತ್ತಿಸಲಾಗಿದೆ. ಎರಡೂ ಹತ್ಯೆಯಲ್ಲಿ ಒಂದೇ ಗನ್ ಅನ್ನು ಬಳಸಲಾಗಿದೆ ಎಂದು ವರದಿ ಹೇಳಿದೆ. ಗೌರಿ ಲಂಕೇಶ್ ಹತ್ಯೆ ನಡೆದ ಸ್ಥಳದಲ್ಲಿ ದೇಹದೊಳಗೆ ಹೊಕ್ಕಿದ ಮೂರು ಬುಲೆಟ್, ಇನ್ನೊಂದು ಬುಲೆಟ್ ಹಾಗೂ ನಾಲ್ಕು ಖಾಲಿ ಕಾಟ್ರಿಜ್ ಪತ್ತೆಯಾಗಿತ್ತು. ಇವುಗಳನ್ನು ಕಲುಬುರ್ಗಿ ಹತ್ಯೆಯ ಸ್ಥಳದಲ್ಲಿ ಪತ್ತೆಯಾಗಿದ್ದ ಎರಡು ಬುಲೆಟ್ ಹಾಗೂ ಕಾಟ್ರಿಜ್‌ಗಳಿಗೆ ಪೊಲೀಸರು ಹೋಲಿಸಿದ್ದರು. ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿ ಕರ್ನಾಟಕ ಪೊಲೀಸ್‌ನ ಸಿಟ್ ಸನಾತನ ಸಂಸ್ಥಾ ಹಾಗೂ ಹಿಂದೂ ಯುವ ಸೇನೆಯ ಐವರನ್ನು ಬಂಧಿಸಿತ್ತು.

 ಹಿಂದೂ ಧರ್ಮ ಹಾಗೂ ದೇವರ ಬಗ್ಗೆ ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ ಗೌರಿ ಲಂಕೇಶ್ ಅವರನ್ನು ಹತ್ಯೆಗೈಯಲಾಗಿದೆ. ಆರೋಪಿ ನವೀನ್ ಕುಮಾರ್ ಹಿಂದೂ ಯುವ ಸೇನಾ ಕಾರ್ಯಕರ್ತ. ಆತ ಕರ್ನಾಟಕ ಹಾಗೂ ಗೋವಾದಲ್ಲಿ ನಡೆದ ಸನಾತನ ಸಂಸ್ಥೆಯ ಹಲವು ಸಭೆಯಲ್ಲಿ ಪಾಲ್ಗೊಂಡಿದ್ದ ಎಂದು ಕರ್ನಾಟಕದ ಮದ್ದೂರಿನಿಂದ ಪ್ರಕರಣಕ್ಕೆ ಸಬಂಧಿಸಿ ಬಂಧಿತನಾಗಿದ್ದ ನವೀನ್ ಕುಮಾರ್ ವಿರುದ್ಧ ಸಲ್ಲಿಸಲಾಗಿದ್ದ ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ. ಗೌರಿ ಲಂಕೇಶ್ ಅವರ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪದಲ್ಲಿ ಉಡುಪಿಯ ಸುಜಿತ್ ಕುಮಾರ್ ಪುಣೆಯ ಅಮೋಲ್ ಕಾಲೆ, ಪೊಂಡಾದ ಅಮಿತ್ ದೇಗ್‌ವೇಕಾರ್ ಹಾಗೂ ವಿಜಯಪುರದ ಮನೋಹರ್ ಇಡಾವೆ ಅವರನ್ನು ಕಳೆದ ವಾರ ಸಿಟ್ ಬಂಧಿಸಿತ್ತು.

ಕೃಪೆ: vbnewsonlie

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...