ಹೊಸದಿಲ್ಲಿ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸಹ ಶಾಸಕ ಬಿ. ಶ್ರೀರಾಮುಲು ಅವರೊಂದಿಗೆ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯಡಿಯೂರಪ್ಪ ಹಾಗೂ ಶ್ರೀರಾಮುಲು ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ಸುಮಿತ್ರಾ ಮಹಾಜನ್ಗೆ ನೀಡಿದ್ದಾರೆ ಎಂದು ಬಿಜೆಪಿಯ ರಾಜ್ಯ ಘಟಕದ ವಕ್ತಾರ ಎಸ್. ಶಾಂತಾರಾಮ್ ತಿಳಿಸಿದ್ದಾರೆ.
ಯಡಿಯೂರಪ್ಪ ಅವರು ಶಿವಮೊಗ್ಗ ಕ್ಷೇತ್ರವನ್ನು ಪ್ರತಿನಿಧಿಸಿದರೆ, ಶ್ರೀರಾಮುಲು ಬಳ್ಳಾರಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ರಾಜ್ಯ ವಿಧಾನ ಸಭೆಯ 222 ಕ್ಷೇತ್ರಗಳಲ್ಲಿ ಮೇ 12ರಂದು ನಡೆದ ಚುನಾವಣೆಯಲ್ಲಿ ಶಿವಮೊಗ್ಗದ ಶಿಕಾರಿಪುರದಿಂದ ಯಡಿಯೂರಪ್ಪ 8ನೇ ಬಾರಿಗೆ ಆಯ್ಕೆಯಾಗಿದ್ದರು. ಮೇ 15ರಂದು ಚುನಾವಣಾ ಫಲಿತಾಂಶ ಹೊರಬಿದ್ದಿತ್ತು.