ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ  ಶಾಸಕ ಸುನೀಲ್ ಗುಂಪಿಗೆ ಒಲಿದ ವಿಜಯ ಮಾಲೆ

Source: sonews | By Staff Correspondent | Published on 20th August 2018, 6:32 PM | Coastal News | Don't Miss |

ಭಟ್ಕಳ:ತಾಲೂಕಿನ ಪಿಎಲ್ಡಿ (ಕೃಷಿ ಹಾಗೂ ಗ್ರಾಮೀಣ ಭೂ ಅಭಿವೃದ್ದಿ ಬ್ಯಾಂಕ್) ಬ್ಯಾಂಕ್‌ನ ೧೫ ನಿರ್ದೇಶಕ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಶಾಸಕ ಸುನೀಲ್ ನಾಯ್ಕ ಸೇರಿದಂತೆ ಬಿಜೆಪಿ ಬೆಂಬಲಿಗರು ೧೪ ಸ್ಥಾನಗಳಲ್ಲಿ ಗೆಲುವು ಸಾಧಿಸುವುದರ ಮೂಲಕ ವಿಜಯಮಾಲೆಯನ್ನು ಧರಿಸಿಕೊಂಡಿದ್ದಾರೆ.

ಬೆಳಿಗ್ಗೆ ೯ರಿಂದ ಸಂಜೆ ೪ಗಂಟೆವರೆಗೆ ನಡೆದ ಮತದಾನದಲ್ಲಿ ಶೇ.೮೦ರಷ್ಟು ಮತದಾನವಾಯಿತು.೬೬೫೫ ಸಾಲಗಾರ ಮತದಾರರು,೧೦೯೭ ಸಾಲಗಾರ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದರು.ಶಾಸಕ ಸುನೀಲ್ ನಾಯ್ಕ ಅತಿ ಹೆಚ್ಚು ೩೧೫೬ ಮತ ಪಡೆದು ಆಯ್ಕೆಯಾಗುವ ಮೂಲಕ ತಮ್ಮ ಎಲ್ಲಾ ಬಿಜೆಪಿ ಬೆಂಬಲಿಗರನ್ನು ಆಯ್ಕೆ ಆಗುವಂತೆ ಮಾಡಿದರು. ಈರಪ್ಪ ಮಂಜಪ್ ನಾಯ್ಕ ಎಂಬ ಒಬ್ಬರು ಮಾತ್ರ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಆಯ್ಕೆಯಾಗಿದ್ದಾರೆ.

ಶಾಸಕ ಸುನೀಲ್ ನೇತೃತ್ವದ ಬಿಜೆಪಿ ಬೆಂಬಲಿಗರಾದ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಈಶ್ವರ ನಾರಾಯಣ ನಾಯ್ಕ, ನವನೀತ ಗಣೇಶ ನಾಯ್ಕ ಗರ್ಡೀಕರ್, ಮಂಜಪ್ಪ ಮಾದೇವ ನಾಯ್ಕ, ಮಂಜುನಾಥ ದುರ್ಗಪ್ಪ ನಾಯ್ಕ, ಸಂತೋಷ ಮಾದೇವ ನಾಯ್ಕ, ಸುರೇಶ ಜಟ್ಟಯ್ಯ ನಾಯ್ಕ, ಸಾಲಗಾರರ  ಹಿಂದುಳಿದ 'ಅ'ವರ್ಗದಿಂದ ಮೋಹನ ಕೊರ್ಗಪ್ಪ ನಾಯ್ಕ, ಹರೀಶ ವೆಂಕಟೇಶ ನಾಯ್ಕ, ಮಹಿಳಾ ಮೀಸಲು ಕ್ಷೇತ್ರದಿಂದ ಕಮಲಾ ರಾಮಚಂದ್ರ ನಾಯ್ಕ, ಗಾಯತ್ರಿ ವಿಜಯಕುಮಾರ ನಾಯ್ಕ, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಮಂಜು ಮಂಜು ಮೊಗೇರ್, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ನಾಗಯ್ಯ ಮಾಸ್ತಿ ಗೊಂಡ, ಸಾಲಗಾರರಲ್ಲದ ಕ್ಷೆತ್ರದಿಂದ ಈಶ್ವರ ಮಂಜುನಾಥ ನಾಯ್ಕ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಸಹಕಾರಿ ಅಧಿಕಾರಿ ಭಾಸ್ಕರ ನಾಯ್ಕ ಕಾರ್ಯನಿರ್ವಹಿಸಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...