ಬೆಳಗಾವಿ:ಬೆಳಗಾವಿ ಬಳಿನದ ರಸ್ತೆ ಅಪಘಾತವೊಂದರಲ್ಲಿ ಹಿರಿಯ ಪತ್ರಕರ್ತ ಹಾಗೂ ಬಾಗಲಕೋಟೆ ಬಿವಿವಿ ಕಾಲೇಜಿನ ಪತ್ರಿಕೋದ್ಯಮ ದ ಪ್ರಾಧ್ಯಾಪಕ ಡಾ.ವೀರೇಶ್ ಹಿರೇಮಠ ಸಾವನ್ನಪ್ಪಿದ್ದಾರೆ.
ಕುಟುಂಬದೊಡನೆ ಗೋವಾ ಪ್ರವಾಸ ಮುಗಿಸಿ ಬಾಗಲಕೋಟೆಗೆ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಬವಿಸಿದೆ ಎಂದು ಹೇಳಲಾಗಿದೆ.
ಹಿರೇಮಠ ಅವರಿದ್ದ ಕಾರು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತವಾಗಿದ್ದು ಘಟನೆ ವೇಳೆ ಕಾರಿನಲ್ಲಿದ್ದ ಕಾರಿನಲ್ಲಿದ್ದ ಪತ್ನಿ ಗೌರಿ ಮತ್ತು ಕಾರು ಚಾಲಕ ಸುನೀಲ್ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಧಾರವಾಡದ ಸಿವಿಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ಜಿಲ್ಲೆಯ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.