ಭಟ್ಕಳದಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಸ್ಥಗಿತ; ಶಾಲಾ ಕಾಲೇಜುಗಳಿಗೆ ರಜೆ

Source: sonews | By Staff Correspondent | Published on 10th September 2018, 5:32 PM | Coastal News | Don't Miss |

ಭಟ್ಕಳ: ಭಾರತ್ ಬಂದ್ ಕರೆಗೆ ಭಟ್ಕಳದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಂದ್ ಶಾಂತಿಯುತವಾಗಿತ್ತು. ಇಲ್ಲಿನ ತಂಝೀಮ್ ಸಂಸ್ಥೆಯು ಭಾರತ್ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಒಂದು ಸಮುದಾಯದ ಎಲ್ಲ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಜೆ.ಡಿ.ಎಸ್. ಕಾಂಗ್ರೇಸ್ ಹಾಗೂ ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲಿಸಿದ್ದವು.

ಹೆದ್ದಾರಿ ಬದಿ ಹಾಗೂ ಶಮ್ಸುದ್ದೀನ್ ವೃತ್ತದಲ್ಲಿ ಒಂದೆರಡು ಅಂಗಡಿಗಳು ತೆರೆದುಕೊಂಡಿದ್ದು, ಸಾರಿಗೆ ಸಂಪೂರ್ಣ ಸ್ಥಗಿತಗೊಂಡಿತ್ತು ಸ್ಥಳಿಯ ಕೆಲ ಆಟೋ ಚಾಲಕರು ತಮ್ಮ ಆಟೋ ರಿಕ್ಷಾವನ್ನು ರಸ್ತೆಗಿಳಿಸಿದ್ದು ಅದರಲ್ಲಿ ಪ್ರಯಾಣಿಕರು ಸಿಗದೆ ಪರದಾಡುತ್ತಿದ್ದರು. 
ತರಕಾರಿ, ಮೀನು ಮಾರಟಗಾರರು ಎಂದಿನಂತೆ ತಮ್ಮ ವ್ಯಾಪಾರವಹಿವಾಟು ನಡೆಸಲು ಪಟ್ಟಣಕ್ಕೆ ಬಂದಿದ್ದರೂ ಕೊಂಡುಕೊಳ್ಳುವವರಿಲ್ಲದೆ ಗ್ರಾಹಕರಿಗಾಗಿ ಕಾದುಕುಳಿತುಕೊಂಡಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಾಲೂಕಾಡಳಿತ ಹಾಗೂ ಪೊಲೀಸ್ ಇಲಾಖೆ ಬಂದೋಬಸ್ತ ವ್ಯವಸ್ಥೆ ಮಾಡಿದ್ದರು. 
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...