ಕಾಂಗ್ರೇಸ್ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷರಾಗಿ ಅಬ್ದುಲ್ ಮಜೀದ್
ಭಟ್ಕಳ: ಕಾಂಗ್ರೆಸ್ ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷರಾಗಿ ಭಟ್ಕಳ ತಾಲೂಕಿನ ಬೆಳಲಖಂಡದ ಅಬ್ದುಲ್ ಮಜೀದ್ ಅಮೀರ್ ಸಾಬ್ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ವಿಭಾಗದ ರಾಜ್ಯಧ್ಯಕ್ಷ ನದೀಮ್ ಜಾವೇದ ಫೆ.13ರಂದು ಆಯ್ಕೆ ಪ್ರಕ್ರಿಯೆ ನಡೆಸಿ ಈ ಆದೇಶ ಹೊರಡಿಸಿದ್ದಾರೆ. ಇವರು ದೇವರಾಜ ಅರಸು ಅವರ ಕಾಲದಿಂದಲೂ ಕಾಂಗ್ರೆಸ್ ಪಕ್ಷದ ಏಳಿಗೆಗಾಗಿ ದುಡಿದಿರುವದನ್ನು ಪರಿಗಣಿಸಿ ಆಯ್ಕೆ ನಡೆಸಲಾಗಿದೆ.