ಭಟ್ಕಳ: ಅಂಜುಮನ್ ಮಾಜಿ ಕಾರ್ಯದರ್ಶಿ ಮೊಹಸಿನ್ ಖರೂರಿ ನಿಧನ

Source: sonews | By Staff Correspondent | Published on 3rd November 2018, 5:58 PM | Coastal News | Don't Miss |

ಭಟ್ಕಳ: ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಮಾಜಿ ಕಾರ್ಯದರ್ಶಿ ಮೋಹಸಿನ್ ಖರೂರಿ(59) ಶುಕ್ರವಾರ ತಡರಾತ್ರಿ ಮದೀನಾ ಕಾಲೋನಿಯ ತಮ್ಮ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾದರು. 

ಓರ್ವ ಪುತ್ರ ಹಾಗೂ ಪುತ್ರಿ, ಪತ್ನಿ ಸೇರಿದಂತೆ ಅಪಾರ ಬಂದುಮಿತ್ರರನ್ನು ಅವರು ಅಗಲಿದ್ದಾರೆ. 

ಮೋಹಸಿನ್ ಖರೂರಿ ಅಂಜುಮನ್ ಸಂಸ್ಥೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಸಧ್ಯ ಅಂಜುಮನ್ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ಇವರು ಸಂಸ್ಥೆಯ ಶತಮಾನೋತ್ಸವ ಸಮಾರಂಭದ ಸಿದ್ಧತೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. 

ನವಾಯತ್ ಕಾಲೋನಿಯ ಮಿಲ್ಲಿಯಾ ಜಾಮಿಯಾ ಮಸೀದಿಯಲ್ಲಿ ಶನಿವಾರ ನಡೆದ ಅಂತಿಮ ಪ್ರಾರ್ಥನೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿ ಅವರ ಅಂತಿಮ ದರ್ಶನ ಪಡೆದರು.

ಇವರ ನಿಧನಕ್ಕೆ ಅಂಜುಮನ್ ಸಂಸ್ಥೆ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೋ, ತಂಝೀಮ್, ಜಮಾಅತೆ ಇಸ್ಲಾಮಿ ಹಿಂದ್ ತರಬಿಯತ್ ಎಜ್ಯುಕೇಶನ್ ಸೂಸೈಟಿ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು, ಸಂಘಸಂಸ್ಥೆಗಳು ಸಂತಾಪವನ್ನು ಸೂಚಿಸಿದ್ದಾರೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...