ಅನಧೀಕೃತವಾಗಿ ಜಾನುವಾರು ವಧೆ ತಡೆಗೆ ಆಗ್ರಹಿಸಿ ಬೆಳ್ನಿ ಸಾರ್ವಜನಿಕರಿಂದ ಮನವಿ

Source: S.O. News Service | By MV Bhatkal | Published on 15th August 2018, 9:21 PM | Coastal News | Don't Miss |

ಭಟ್ಕಳ: ತಾಲೂಕಿನ ಮಾವಿನಕುರ್ವೆ ಬೆಳ್ನಿ ವ್ಯಾಪ್ತಿಯಲ್ಲಿ ಜಾನುವಾರು ಹಿಂಸೆಗೆ ತಡೆ ನೀಡಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ಮಂಗಳವಾರ ಭಟ್ಕಳ ಸಿಪಿಐ ಮೂಲಕ ಡಿವಾಯ್‍ಎಸ್ಪಿಯವರಿಗೆ ಮನವಿ ಸಲ್ಲಿಸಿದರು.
ಬೆಳ್ನಿ ಗ್ರಾಮದ ಜನತಾ ಕಾಲೋನಿಯಲ್ಲಿ ನಾಗಬನ, ದೇವಸ್ಥಾನಗಳು ಇವೆ. ಈ ಪ್ರದೇಶದಲ್ಲಿ ಹಬ್ಬದ ಹೆಸರಿನಲ್ಲಿ ಜಾನುವಾರು ವಧೆ ಮಾಡಿ ರಕ್ತವನ್ನು ಪೂಜಾ ಸ್ಥಳದತ್ತ ಹರಿಸಲಾಗುತ್ತದೆ. ಅಲ್ಲದೇ ಜಾನುವಾರು ವಧೆ ಸಂದರ್ಭದಲ್ಲಿ ನಡೆಯುವ ಜನರ ಕೂಗಾಟ, ಚೀರಾಟ ಸುತ್ತಮುತ್ತ 100ಮೀವರೆಗೂ ಕೇಳಿಸುತ್ತದೆ. ಇದರಿಂದ ಜನರ ಧಾರ್ಮಿಕ ಭಾವನೆಗಳಿಗೆ ತೊಂದರೆಯಾಗುತ್ತಿದೆ. ನಾವು ಕಳೆದ ವರ್ಷವೇ ಇದನ್ನು ತಡೆಯುವಂತೆ ಮನವಿ ಮಾಡಿಕೊಂಡಿದ್ದರೂ ಈ ಬಗ್ಗೆ ಯಾರೂ ಲಕ್ಷ್ಯ ವಹಿಸುತ್ತಿಲ್ಲ. ಇದು ಬೆಳ್ನಿ ಪರಿಸರದಲ್ಲಿ ಜಗಳಕ್ಕೆ ಕಾರಣವಾಗುವ ಎಲ್ಲ ಸಾಧ್ಯತೆ ಇದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸಿಪಿಐ ಗಣೇಶ ಮನವಿಯನ್ನು ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಬೆಳ್ನಿ ಭಾಗದ ಸಾರ್ವಜನಿಕರಾದ ರಮೇಶ ನಾಯ್ಕ, ದಾಸ ನಾಯ್ಕ, ರವಿ ನಾಯ್ಕ, ನಾರಾಯಣ ನಾಯ್ಕ, ಪಾಂಡು ನಾಯ್ಕ, ವೆಂಕಟೇಶ ನಾಯ್ಕ, ನಾಗಪ್ಪ ನಾಯ್ಕ ಸೋಮಯ್ಯ ನಾಯ್ಕ ಮುಂತಾದವರು ಉಪಸ್ಥಿತರಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...