ಭಟ್ಕಳದಲ್ಲಿ ಬಯೋಮೆಟ್ರಿಕ್ ಪದ್ಧತಿ ರದ್ದತಿಗೆ ಸಿಐಟಿಯು ಆಗ್ರಹ

Source: S O News service | By V. D. Bhatkal | Published on 1st September 2018, 8:00 PM | Coastal News | Don't Miss |

ಭಟ್ಕಳ: ತಾಲೂಕಿನ ಬಯೋಮೆಟ್ರಿಕ್ ಪಡಿತರ ವ್ಯವಸ್ಥೆಯಿಂದ ತಾಲೂಕಿನ ಬಡವರು ಹಾಗೂ ಕೂಲಿಕಾರರಿಗೆ ತೊಂದರೆಯಾಗುತ್ತಿದ್ದು, ಇದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಭಟ್ಕಳ ತಾಲೂಕು ಸಮಿತಿಯ ಸದಸ್ಯರು ಶುಕ್ರವಾರ ಸಂಜೆ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಬಯೋಮೆಟ್ರಿಕ್ ಜಾರಿಯಿಂದಾಗಿ ಜನರು ಕೆಲಸ ಕಾರ್ಯಗಳನ್ನು ಬಿಟ್ಟು ಸರತಿ ಸಾಲಿನಲ್ಲಿ ನಿಲ್ಲುವುದಲ್ಲದೇ ಅವರ ಹೆಬ್ಬೆರಳ ಗುರುತು ತಾಂತ್ರಿಕ ಕಾರಣಗಳಿಂದಾಗಿ ಸರಿಯಾಗಿ ಹೊಂದಿಕೊಳ್ಳದೇ ಹೋದರೆ ವಾಪಸ್ಸು ಬರಬೇಕಾದ ಸ್ಥಿತಿ ಇದೆ. ಇದು ಕೆಲವೊಮ್ಮೆ 2-3 ಬಾರಿ ಪುನರಾವರ್ತನೆಯಾಗುತ್ತಿದೆ. ಪ್ರತಿನಿತ್ಯ ಕೂಲಿ ಕೆಲಸವನ್ನು ಜೀವನಕ್ಕೆ ಆಧಾರವಾಗಿ ಇರಿಸಿಕೊಂಡವರಿಗೆ ಪಡಿತರ ಅಂಗಡಿಗೆ ಅಲೆದಾಟದಿಂದಾಗಿ ಸಂಬಳ ಸಿಗದೇ ಇರುವುದು ಒಂದು ಕಡೆಯಾದರೆ ಪಡಿತರ ಸಾಮಾನು ನಿಗದಿತ ಸಮಯದಲ್ಲಿ ಸಿಗದಂತಾಗಿದೆ. ಭಟ್ಕಳದಲ್ಲಿ ಈ ಪದ್ದತಿಯನ್ನು ಕೈ ಬಿಡಬೇಕು. ಅಲ್ಲದೇ ತಾಲೂಕಿನ ಹಲವೆಡೆ ರೈತರು ಅರಣ್ಯ ಭೂಮಿಯನ್ನು ಅತಿಕ್ರಮಿಸಿಕೊಂಡು ಮನೆಯನ್ನು ಕಟ್ಟಿಕೊಂಡಿದ್ದು, ಯಾವುದೇ ಕಾರಣಕ್ಕೂ ಅವರನ್ನು ತೆರವುಗೊಳಿಸಬಾರದು. ಮನೆಯನ್ನು ದುರಸ್ತಿ ಪಡಿಸಿಕೊಂಡು ವಾಸಿಸಲು ಅವಕಾಶ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಸಂಘಟನೆಯ ಸದಸ್ಯರು ಆಗ್ರಹಿಸಿದರು.

ತಹಸೀಲ್ದಾರ ವಿ.ಎನ್.ಬಾಡ್ಕರ್ ಮನವಿ ಪತ್ರವನ್ನು ಸ್ವೀಕರಿಸಿದರು. ಗೀತಾ ನಾಯ್ಕ, ಪುಂಡಲೀಕ ನಾಯ್ಕ, ಸುಧಾ ಭಟ್ಟ, ಪುಷ್ಪಾವತಿ ನಾಯ್ಕ, ಗಜೇಂದ್ರ ಶಿರಾಲಿ, ಚಂದ್ರಕಲಾ ನಾಯ್ಕ, ಅನುರಾಧಾ ಡಿಕೋಸ್ತಾ ಮೊದಲಾದವರು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...