ಭಟ್ಕಳ: ಬುಧವಾರದಂದು ತನ್ನ ಸ್ನೇಹಿತರೊಂದಿಗೆ ಸೋಡಿಗದ್ದೆ ಸಮುದ್ರ ಕಿನಾರೆಯಲ್ಲಿ ಮೀನು ಹಿಡಿಯುತ್ತಿದ್ದಾಗ ಕಾಲು ಜಾರಿಬಿದ್ದು ಕಣ್ಮರೆಯಾಗಿದ್ದ ವ್ಯಕ್ತಿಯ ಮೃತದೇಹ ಗುರುವಾರ ಸಂಜೆ ಪತ್ತೆಯಾಗಿದ್ದು ಮೃತ ವ್ಯಕ್ತಿಯನ್ನು ಯಲ್ವಡಿಕವೂರು ಪಂಚಾಯತ್ ವ್ಯಾಪ್ತಿಯ ಬೈಲೂರು ನಿವಾಸಿ ರಾಮಚಂದ್ರ ಸೋಮಯ್ಯ ಗೊಂಡ(27) ಎಂದು ಗುರುತಿಸಲಾಗಿದೆ.
ಲಭ್ಯ ಮಾಹಿತಿಯಂತೆ ರಾಮಚಂದ್ರ ತನ್ನ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದಾಗ ದೈತ್ಯ ಅಲೆಯೊಂದು ಅಪ್ಪಳಿಸಿದ್ದು ಕಾಲು ಜಾರಿ ಸಮುದ್ರಕ್ಕೆ ಬಿದ್ದರು ಎನ್ನಲಾಗಿದೆ. ಗುರುವಾರ ಸಂಜೆ ಅವರ ಮೃತದೇಹ ದೊರಕಿದೆ ಎಂದು ವರದಿಯಾಗಿದೆ. ಪ್ರಕರಣ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದೆ.