ಮೀನು ಹಿಡಿಯುತ್ತಿದ್ದಾಗ ಸಮುದ್ರದಲ್ಲಿ ಬಿದ್ದು ಕಣ್ಮರೆಯಾದ ವ್ಯಕ್ತಿಯ ಮೃತದೇಹ ಪತ್ತೆ

Source: sonews | By Staff Correspondent | Published on 5th January 2018, 5:19 PM | Coastal News | Don't Miss |

ಭಟ್ಕಳ: ಬುಧವಾರದಂದು ತನ್ನ ಸ್ನೇಹಿತರೊಂದಿಗೆ ಸೋಡಿಗದ್ದೆ ಸಮುದ್ರ ಕಿನಾರೆಯಲ್ಲಿ ಮೀನು ಹಿಡಿಯುತ್ತಿದ್ದಾಗ ಕಾಲು ಜಾರಿಬಿದ್ದು ಕಣ್ಮರೆಯಾಗಿದ್ದ ವ್ಯಕ್ತಿಯ ಮೃತದೇಹ ಗುರುವಾರ ಸಂಜೆ ಪತ್ತೆಯಾಗಿದ್ದು ಮೃತ ವ್ಯಕ್ತಿಯನ್ನು ಯಲ್ವಡಿಕವೂರು ಪಂಚಾಯತ್ ವ್ಯಾಪ್ತಿಯ ಬೈಲೂರು ನಿವಾಸಿ ರಾಮಚಂದ್ರ ಸೋಮಯ್ಯ ಗೊಂಡ(27) ಎಂದು ಗುರುತಿಸಲಾಗಿದೆ. 


ಲಭ್ಯ ಮಾಹಿತಿಯಂತೆ ರಾಮಚಂದ್ರ ತನ್ನ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದಾಗ ದೈತ್ಯ ಅಲೆಯೊಂದು ಅಪ್ಪಳಿಸಿದ್ದು ಕಾಲು ಜಾರಿ ಸಮುದ್ರಕ್ಕೆ ಬಿದ್ದರು ಎನ್ನಲಾಗಿದೆ. ಗುರುವಾರ ಸಂಜೆ ಅವರ ಮೃತದೇಹ ದೊರಕಿದೆ ಎಂದು ವರದಿಯಾಗಿದೆ. ಪ್ರಕರಣ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...