ಭಟ್ಕಳ: ತಾಲೂಕಿನ ಕಿತ್ರೆ ಗ್ರಾಮ ವ್ಯಾಪ್ತಿಯ ಬಸ್ ನಿಲ್ದಾಣದ ಸಮೀಪದಲ್ಲಿ ಶುಕ್ರವಾರದಂದು ಸಂಜೆ 13 ಅಡಿ ಕಾಳಿಂಗ ಸರ್ಪವನ್ನು ಸ್ಥಳಿಯ ಉರಗ ತಜ್ಞ ಸೌಫಿಲ್ ಸೆರೆ ಹಿಡಿದು ಇಲ್ಲಿನ ಗಡಿಭಾಗದ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಶುಕ್ರವಾರದಂದು ಇಲ್ಲಿನ ಕಿತ್ರೆ ರಸ್ತೆಯ ಮಾರ್ಗದಲ್ಲಿ ಕಾಳಿಂಗ ಸರ್ಪವೂ ಓಡಾಡಲು ಆಗದ ಸ್ಥಿತಿಯಲ್ಲಿದ್ದ ವೇಳೆ ಇಲ್ಲಿನ ಸ್ಥಳಿಯರ ಗಮನಕ್ಕೆ ಬಂದಿದೆ. ತಕ್ಷಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಾಗೂ ಉರಗ ತಜ್ಞ ನೌಫಿಲ್ ಅವರಿಗೆ ಸ್ಥಳಿಯರು ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಉರಗ ತಜ್ಞ ನೌಫಿಲ್ ಸಾಕಷ್ಟು ಪ್ರಯತ್ನ ಪಟ್ಟು ಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿದಿದು ತಾಲೂಕಿನ ಗಡಿಭಾಗದ ಅರಣ್ಯ ಪ್ರದೇಶಕ್ಕೆ ಹಾವನ್ನು ಬಿಟ್ಟು ಬಂದಿದ್ದಾರೆ. ಕಾಳಿಂಗ ಸರ್ಪವು ಹೆಬ್ಬಾವೊಂದನ್ನು ನುಂಗಿದ್ದರ ಹಿನ್ನೆಲೆ ಓಡಾಡಲು ಆಗದ ಸ್ಥಿತಿಯಲ್ಲಿತ್ತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಕಾರ್ಯಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ರವಿ ಮತ್ತು ಮಲ್ಲಿಕಾರ್ಜುನ, ಅರಣ್ಯ ರಕ್ಷಕ ರಾಮ ನಾಯ್ಕ ಇದ್ದರು.
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...