ಭಟ್ಕಳದಲ್ಲಿ ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮ
ಭಟ್ಕಳ: ತಾಲೂಕಿನ ಅಗ್ನಿಶಾಮಕ ದಳ ಹಾಗೂ ರೋಟರಿ ಕ್ಲಬ್ ಭಟ್ಕಳ ಇವರ ಆಶ್ರಯದಲ್ಲಿ ತಾಲೂಕಿನ ಅಂಜುಮನ್ ಇಂಜಿನೀಯರಿಂಗ್ ಕಾಲೇಜಿನಲ್ಲಿ ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಗ್ನಿಶಾಮಕ ದಳದ ಅಧಿಕಾರಿ ವೆಂಕಟ್ರಮಣ, ಅಗ್ನಿ ಅವಘಡದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಕಾರ್ಯಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಬೆಂಕಿ ನಂದಿಸುವ ಪ್ರಾತ್ಯಕ್ಷಿಗಳನ್ನು ವಿದ್ಯಾರ್ಥಿಗಳ ಮುಂದೆ ಪ್ರದರ್ಶಿಸಲಾಯಿತು. ಭಟ್ಕಳ ಅಂಜುಮನ್ ಇಂಜಿನೀಯರಿಂಗ್ ಕಾಲೇಜಿನ ಪ್ರಾಚಾರ್ಯ ಮುಷ್ತಾಕ್ ಅಹ್ಮದ್ ಬಾವಿಕಟ್ಟೆ ಉಪಸ್ಥಿತರಿದ್ದರು.