ಪ್ರಯತ್ನ ಮತ್ತು ಏಕಾಗ್ರತೆ ವಿದ್ಯಾರ್ಥಿ ಜೀವನದ ಪ್ರಮುಖ ಅಂಗ-ರಾಮರಥ್

Source: sonews | By Staff Correspondent | Published on 28th July 2018, 11:42 PM | Coastal News |

ಭಟ್ಕಳ:  ಪ್ರಯತ್ನ ಮತ್ತು ಏಕಾಗ್ರತೆ ವಿದ್ಯಾರ್ಥಿ ಜೀವನದ ಪ್ರಮುಖ ಅಂಗ, ಇದನ್ನು ಗಳಿಸಿ ಇಂದಿನ ಈ ಸ್ಪರ್ಧಾತ್ಮಕಯುಗದಲ್ಲಿ ಯಶಸ್ಸು ಪಡೆಯಿರಿ ಎಂದು ಶಿರಾಲಿಯ ಜನತಾ ವಿದ್ಯಾಲಯ ಪಿ.ಯು ಕಾಲೇಜಿನ ಪ್ರಾಂಶುಪಾಲ ಎ.ಬಿ.ರಾಮರಥ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅವರು ಶ್ರೀ ಗುರು ಸುಧೀಂದ್ರ ಬಿಸಿಎ ಬಿಬಿಎ ಕಾಲೇಜಿನಲ್ಲಿ 2018-19 ನೇ ಸಾಲಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮತನಾಡಿದರು. 

ಉಪಸ್ಥಿತರಿದ್ದ  ಮತ್ತೋರ್ವ ಮುಖ್ಯ ಅತಿಥಿ ಹಾಗೂ ಹಳೆಯ ವಿದ್ಯಾರ್ಥಿ, ಎಕ್ಸೆಂಚರ್ ಕಂಪೆನಿಯ ಮಾರುಕಟ್ಟೆ ತಜ್ಞ ನರೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕೌಶಲ್ಯವನ್ನು ಬೆಳೆಸಿಕೊಡು ಉದ್ಯೋಗವಂತರಾಗಬೇಕು ಎಂದರು. 

ಈ ಸಂದರ್ಭದಲ್ಲಿ 2017-18ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವೇದಿಕೆಯಲ್ಲಿ ಭಟ್ಕಳ ಎಜ್ಯುಕೇಶನ್ ಟ್ರಸ್ಟ್  ಅಧ್ಯóಕ್ಷ ಡಾ. ಸುರೇಶ ನಾಯಕ್, ಆಡಳಿತಾಧಿಕಾರಿ ನಾಗೇಶ ಭಟ್ಟ್, ಬಿಸಿಎ ಪ್ರಾಂಶುಪಾಲ ಶ್ರೀನಾಥ ಪೈ, ಬಿ.ಕಾಂ ಶೈಕ್ಷಣಿಕ ಮುಖ್ಯಸ್ಥ ಪಿ.ಎಸ್. ಹೆಬ್ಬಾರ್, ಬಿ.ಬಿ.ಎ ಶೈಕ್ಷಣಿಕ ಸಂಯೋಜಕ ವಿಶ್ವನಾಥ ಭಟ್ಟ್ ಉಪಸ್ಥಿತರಿದ್ದರು. 

ವಿದ್ಯಾರ್ಥಿಗಳಾದ ಅಕ್ಷಯ್ ಪ್ರಭು ಹಾಗೂ ರಾಜೇಶ್ವರಿ ನಿರೂಪಿಸಿದರು. ಉಪನ್ಯಾಸಕ ಓಂಕಾರ ಮರ್ಬಳ್ಳಿ ವಂದಿಸಿದರು. 
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...