ಭಟ್ಕಳ: ತಾಲೂಕಿನಾದ್ಯಂತ ಮಳೆಯ ಅರ್ಭಟ ಮುಂದುವರೆದಿದ್ದು ಕಳೆದ ಐದಾರು ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜನರು ಹಲವು ತೊಂದರೆಗಳನ್ನು ಅನುಭವಿಸುವಂತಾಗಿದೆ.
ತಾಲೂಕಿನಲ್ಲಿ ಹರಿಯುತ್ತಿರುವ ನದಿ, ಹೊಳೆ ಹಳ್ಳಗಳು ತುಂಬಿಕೊಂಡಿದ್ದು ತನ್ನ ಪೌರುಷವನ್ನು ಮೆರೆಯುತ್ತಿವೆ. ಬುಧವಾರ ರಾತ್ರಿ ಬಿದ್ದ ಮಳೆಯಿಂದಾಗಿ ಅಲ್ಲಲ್ಲಿ ಬೃಹತ್ ಮರ ಹಾಗೂ ವಿದ್ಯುತ್ ಕಂಬಗಳು ಧರಾಶಾಹಿಯಾಗುತ್ತಿದ್ದು ಹೆದ್ದಾರಿಗೆ ತಾಗಿಕೊಂಡ ಶಿಫಾ ಕ್ರಾಸ್ ಬಳಿ ಮರವೊಂದು ಬೇರು ಸಹಿತ ಉರುಳಿ ಬಿದ್ದಿದ್ದು ಇದರ ಪರಿಣಾವಾಗಿ ಎರಡು ವಿದ್ಯುತ್ ಕಂಬಗಳು ಧರೆಗುರುಳಿವೆ. ಮರವು ನಯೀಮ್ ಎಂಬುವವರ ಮನೆ ಮೇಲೆ ಬಿದ್ದಿದು ಮನೆಗೆ ತುಂಬಾ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಆದರೆ ಯಾವುದೇ ಜೀವ ಹಾನಿ ಸಂಭವಿಸಲಿಲ್ಲ. ಗ್ರಾಮೀಣ ಭಾಗದ ಮುಂಡಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿ ಸುಭ್ರಾಯ ದೇವಾಡಿಗ ಎಂಬುವವ ಮನೆ ಗೋಡೆ ಕುಸಿದು ಬಿದ್ದಿದ್ದು ಅಧಿಕಾರಿಗಳು ಪಂಚನಾಮೆಯನ್ನು ನಡೆಸಿದ್ದಾರೆ. ಭಾರೀ ಮಳೆಯಿಂದಾಗಿರಾಷ್ಟ್ರೀಯ ಹೆದ್ದಾರಿಯ ಮೇಲೆ ಸುಮಾರು ಎರಡುಅಡಿಗಷ್ಟು ನೀರು ನಿಂತು ಹೆದ್ದಾರಿಯಲ್ಲಿ ಓಡಾಡುವವಾಹನ ಸವಾರರು ತೀವ್ರ ತೊಂದರೆ ಪಟ್ಟಿದ್ದರೆ,ದ್ವಿಚಕ್ರ ವಾಹನ ಸವಾರರು ಕೂಡಾ ಪ್ರಯಾಸದಿಂದ ವಾಹನ ಚಲಾಯಿಸಬೇಕಾಗಿಬಂದಿತ್ತು.