ಭಟ್ಕಳ: ಮುರ್ಡೇಶ್ವರ ಪಾಲಿಟೆಕ್ನಿಕ್ನಲ್ಲಿ ಆಯೋಜಿಸಲಾಗಿದ್ದ ಇಂಜಿನಿಯರ್ಸ್ ಡೇ, ಟೀಚರ್ಸ್ ಡೇ, ಎನ್.ಎಸ್.ಎಸ್. ಘಟಕ ಉದ್ಘಾಟನೆ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಹೆಸ್ಕಾಂ ಭಟ್ಕಳ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಮಂಜುನಾಥ ಅವರು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪಾಲಿಟೆಕ್ನಿಕ್ನ ಪ್ರಭಾರ ಪ್ರಾಚಾರ್ಯ ಕೆ. ಮರಿಸ್ವಾಮಿ ಡಾ!! ಸರ್ವಪಲ್ಲಿ ರಾಧಾಕೃಷ್ಣನ್ ಅವರು ರಾಷ್ಟ್ರಪತಿಯಾಗಿದ್ದ ಸಂದರ್ಭದಲ್ಲಿ ಯುವ ಜನತೆಯ ಮೇಲೆ ಹೆಚ್ಚಿನ ನಂಬಿಕೆಯಿಟ್ಟಿದ್ದರು. ನಮ್ಮ ದೇಶದ ಎರಡನೇ ಸಾಲಿನ ಸೈನಿಕರೇ ಯುವಕರು ಎಂದು ನಂಬಿದ್ದರು ಎಂದರು.
ಸರ್. ಎಮ್. ವಿಶ್ವೇಶ್ವರಯ್ಯನವರು ಭಾರತದ ಶ್ರೇಷ್ಟ ಇಂಜಿನಿಯರ್ ಆಗಿದ್ದರು. ಅವರು ಸರ್ಕಾರದ ಕೆಲಸವೆಂದರೆ ದೇವರ ಕೆಲಸವೆಂಬುದರಲ್ಲಿ ಪೂರ್ಣ ನಂಬಿಕೆ ಇಟ್ಟಿದ್ದರು. ನೀರಾವರಿ ವ್ಯವಸ್ಥೆಯಲ್ಲಿ ಅವರು ವಿಶ್ವಾದಾದ್ಯಂತ ಪ್ರಶಂಸೆಗೆ ಪಾತ್ರರಾದವರಾಗಿದ್ದು ಕಾವೇರಿ ನದಿಗೆ ಕೆ.ಆರ್.ಎಸ್. ಆಣೆಕಟ್ಟು ನಿರ್ಮಿಸಿ 1 ಲಕ್ಷ 50 ಸಾವಿರ ಹೆಕ್ಟೇರ್ ಬರಡು ಭೂಮಿಗೆ ನೀರು ಒದಗಿಸಿ, ಮೈಸೂರು ಬೆಂಗಳೂರಿನವರಿಗೆ ಕುಡಿಯುವ ನೀರಿನ ವ್ಯ್ತವಸ್ಥೆಯನ್ನು ಮಾಡಿದ್ದಲ್ಲದೆ ಕರ್ನಾಟಕದ ಸರ್ವೊತೋಮೂಖ ಅಭಿವೃದ್ಧಿಗೆ ಶ್ರಮಿಸಿದರು. ನಿಷ್ಠೆ, ಸಮಯಪ್ರಜ್ಞೆ, ಶಿಸ್ತು, ಪ್ರಾಮಾಣಿಕತೆಗೆ ಮತ್ತೊಂದು ಹೆಸರೇ ಸರ್.ಎಮ್ ವಿಶ್ವೇಶ್ವರಯ್ಯನವರಾಗಿದ್ದರು ನಾವೆಲ್ಲರೂ ಅವರ ಆದರ್ಶವನ್ನು ಪಾಲಿಸೋಣ ಎಂದೂ ತಿಳಿಸಿದರು.ು.
ಉದ್ಘಾಟಕರಾದ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಮಂಜುನಾಥ ಹಾಗೂ ಮುಖ್ಯ ಅತಿಥಿ ಸಿದ್ಧಾರ್ಥ ಪ್ರೌಢ ಶಾಲೆಯ ಪ್ರಾಚಾರ್ಯ ಪ್ರಹಲ್ಲಾದ ರಾಯಚೂರು ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿ ಸಂಘದ ಬಗ್ಗೆ ಸಾಂಸ್ಕøತಿಕ ಸಮಿತಿ ಸಂಚಾಲಕ ಸಾಹಿದತ್, ಎನ್.ಎಸ್.ಎಸ್. ಬಗ್ಗೆ ದಿನೇಶ ಆಚಾರ್ಯ ಮಾತಾನಾಡಿದರು.
ಸರ್.ಎಮ್. ವಿಶ್ವೇಶ್ವರಯ್ಯನವರ ಕುರಿತು ಪ್ರಬಂಧ ಸ್ಪರ್ದೆಯಲ್ಲಿ ವಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ವಿ.ಟಿ. ಭಟ್, ಜಿ. ಮಂಜುನಾಥ, ರುದ್ರಪ್ಪ ಡಿ. ನಾಯ್ಕ, ಉದಯ ಪಾಟೀಲ್, ಹರೀಶ ಪಟ್ಟಿಯಾಳ, ಕಮಾಲಕರ ನಾಯ್ಕ ಉಪಸ್ಥಿತರಿದ್ದರು.
ಕುಮಾರಿ ಶ್ವೇತಾ, ಕುಮಾರಿ ಅಕ್ಷತಾ ಮತ್ತು ಪವಿತ್ರಾ ಸಂಗಡಿಗರು ಪ್ರಾರ್ಥಿಸಿದರು. ಅಕ್ಷಯ ಡಿಕೋಸ್ತ ಸ್ವಾಗತಿಸಿದರು, ಉಪನ್ಯಾಸಕ ಕೆ.ಬಿ. ಹೆಗಡೆ ನಿರ್ವಹಿಸಿದರು. ಕುಮಾರಿ ನಿಕಿತಾ ವಂದಿಸಿದರು.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಮಾರ್ಚ 28 ಕ್ಕೆ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಮಾರ್ಚ 28 ರ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ
ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...
ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ – 12 ಮಂದಿಗೆ ಗಡಿಪಾರು
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ...
ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ...
ಭಟ್ಕಳ: ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!
ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!