ಭಟ್ಕಳದಲ್ಲಿ ಹೆದ್ದಾರಿ ಬದಿ ಈಗ ಜನರಿಗೆ ಬಸ್ ನಿಲ್ದಾಣ!

Source: S O News Service | By V. D. Bhatkal | Published on 19th July 2018, 10:36 AM | Coastal News | Special Report |

ಭಟ್ಕಳ: ತಾಲೂಕಿನ ಬಸ್ ನಿಲ್ದಾಣದ ಕಟ್ಟಡ ನೆಲಕ್ಕೆ ಬಿದ್ದು 2-3 ದಿನಗಳು ಕಳೆದು ಹೋಗಿದೆ. ಬಸ್ ನಿಲುಗಡೆಗೆ ಪರ್ಯಾಯ ಜಾಗವನ್ನು ಗೊತ್ತು ಮಾಡದ ಕಾರಣ ರಾಷ್ಟ್ರೀಯ ಹೆದ್ದಾರಿಯ ಬದಿಯೇ ಈಗ ಜನರಿಗೆ ನಿಲ್ದಾಣವಾಗಿದೆ.

 ನಿತ್ಯವೂ ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಬಸ್‍ಗಾಗಿ ಹೆದ್ದಾರಿಯಂಚಿನಲ್ಲಿ ನಿಂತು ಕಾಯುತ್ತಿದ್ದಾರೆ. ಒಂದು ಕಡೆ ಮಳೆ, ನಿಂತ ಜಾಗದಲ್ಲಿ ಹೊಂಡ, ಕೆಸರಿನ ನೀರು ಪ್ರಯಾಣಿಕರನ್ನು ಹೈರಾಣಾಗಿಸಿದೆ. ದೂರದ ಊರಿಗೆ ಹೊರಟವರು ಬಸ್ ಎಲ್ಲಿ ನಿಲ್ಲುತ್ತದೆ ಎನ್ನುವುದು ಗೊತ್ತಾಗದೇ ಪರದಾಡುತ್ತಿದ್ದಾರೆ. ಮಕ್ಕಳು, ಲಗೇಜ್ ಇದ್ದರಂತೂ ಕೇಳುವುದೇ ಬೇಡ! ಇದ್ದ ಜಾಗದಲ್ಲಿ ಒಂದಕ್ಕಿಂತ ಹೆಚ್ಚು ಬಸ್ಸುಗಳನ್ನು ನಿಲ್ಲಿಸುವುದೂ ಕಷ್ಟಸಾಧ್ಯವಾಗಿದೆ. ಪರಿಣಾಮವಾಗಿ ಬಸ್ ನಿಲ್ದಾಣದ ಎದುರು ನಿತ್ಯವೂ ವಾಹನ ದಟ್ಟನೆ ವಿಪರೀತವಾಗಿದೆ. ಮಕ್ಕಳಿಗೆ, ವಯಸ್ಸಾದವರಿಗೆ ರಸ್ತೆ ದಾಟುವುದು ಸಾಹಸದ ಕೆಲಸವಾಗಿದೆ. ಬಸ್ ಚಾಲಕರು, ನಿರ್ವಾಹಕರಿಗೆ ಬಸ್ಸುಗಳೇ ತಂಗುದಾಣವಾಗಿದೆ.

ಹಳೆಯ ಕಟ್ಟಡ ಉರುಳಿಸಿ ಅಪಾಯವನ್ನು ತಪ್ಪಿಸಿದ ಅಧಿಕಾರಿಗಳು ನಂತರದ ಕೆಲಸ ತಮ್ಮದಲ್ಲ ಎನ್ನುವಂತೆ ಸುಮ್ಮನಿದ್ದು ಬಿಟ್ಟಿದ್ದಾರೆ. ಹಳೆಯ ಬಸ್ ನಿಲ್ದಾಣ ಇದ್ದ ಜಾಗದಲ್ಲಿಯಾದರೂ ಬಸ್ ನಿಲುಗಡೆಗೆ ಅವಕಾಶ ಕಲ್ಪಿಸುವ ಬಗ್ಗೆಯೂ ಇನ್ನೂ ಅಧಿಕಾರಿಗಳು ನಿರ್ಧಾರ ತೆಗೆದುಕೊಂಡಿಲ್ಲ.

ಕಟ್ಟಡ ಉರುಳಿದ ನಂತರ ಮಣ್ಣು ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯವೂ ಸಮರ್ಪಕವಾಗಿ ನಡೆಯುತ್ತಿಲ್ಲ. ಆದರೆ ಬಿದ್ದ ಕಟ್ಟಡದ ಒಳಗಿನಿಂದ ತಗಡು, ಶೀಟ್, ಕಬ್ಬಿಣ ಇತ್ಯಾದಿಗಳನ್ನು ತುಂಬಿಕೊಂಡು ಸಾಗಿಸಲಾಗುತ್ತಿದ್ದು, ಈ ಬಗ್ಗೆ ಇಲ್ಲಿನ ಅಧಿಕಾರಿಗಳು ತಮಗೆ ಮಾಹಿತಿಯೇ ಇಲ್ಲವೆನ್ನುತ್ತಿದ್ದಾರೆ. ಲಕ್ಷಾಂತರ ರುಪಾಯಿ ಗುಜರಿ ಸಾಮಾನುಗಳು ಕುಸಿತಕಂಡ ಬಸ್‍ನಿಲ್ದಾಣದಲ್ಲಿದ್ದು, ಕಳ್ಳತನವಾಗುವ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ಸಂಶಯ ವ್ಯಕ್ತವಾಗುತ್ತಿದೆ. 
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...