ಪ್ರತಿ ತಿರುವಿನಲ್ಲೂ ಪ್ರೇಮದ ದೀಪ ಬೆಳಗಲಿ; ಶಕೀಲ್ ಸಮ್ದಾನಿ

Source: S O News Service | By Staff Correspondent | Published on 11th August 2017, 8:59 PM | Coastal News | State News | Don't Miss |

ಭಟ್ಕಳ: ಇಂದು ದೇಶಕ್ಕೆ  ಹಿಂದೂ-ಮುಸ್ಲಿಮ್ ಭಾವೈಕ್ಯತೆ ಅತಿ ಅವಶ್ಯಕತೆಯಾಗಿದ್ದು ನಾವು ಪ್ರತಿಯೊಂದು ತಿರುವಿನಲ್ಲೂ ಪ್ರೀತಿ, ಪ್ರೇಮ, ಸೌಹಾರ್ಧತೆಯ ದೀಪವನ್ನು ಬೆಳಗಬೇಕಾಗಿದೆ ಎಂದು ಅಲಿಘಡ್ ಮುಸ್ಲಿಮ್ ವಿಶ್ವವಿದ್ಯಾಲಯದ ಕಾನೂನು ವಿಭಾಗದ ಮುಖ್ಯಸ್ಥ ಡಾ.ಮುಹಮ್ಮದ್ ಶಕೀಲ್ ಸಮ್ದಾನಿ ಹೇಳಿದರು. 

ಅವರು ಶುಕ್ರವಾರ ಇಲ್ಲಿನ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲಾ ಮೈದಾನದಲ್ಲಿ ರಾಬಿತಾ ಸೂಸೈಟಿ ಆಯೋಜಿಸಿದ್ದ ‘ರಾಬಿತಾ ಶೈಕ್ಷಣಿಕ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. 

ದೇಶದ ಮುಸ್ಲಿಮರು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎನ್ನುವ ಮಾತನ್ನು ಖಂಡಿಸಿದ ಅವರು ಇಂದು ಭಾರತೀಯ ಮುಸ್ಲಿಮರು ಅದರಲ್ಲೂ ಉತ್ತರಭಾರತದ ಮುಸ್ಲಿಮರಲ್ಲಿ ಶೈಕ್ಷಣಿಕ ಜಾಗೃತಿಯಾಗುತ್ತಿದ್ದು ಈ ಬಾರಿಯ ಐ‌ಎ‌ಎಸ್ ಪರೀಕ್ಷೆಯಲ್ಲಿ  ಟಾಪ್ ಟೆನ್ ವಿದ್ಯಾರ್ಥಿಗಳಲ್ಲಿ ಪ್ರಥಮ ಮೂರು ಸ್ಥಾನಗಳನ್ನು ಮುಸ್ಲಿಮರು ಪಡೆದುಕೊಂಡಿರುವುದೇ ಸಾಕ್ಷಿಯಾಗಿದೆ. ದಕ್ಷಿಣ ಭಾರತಕ್ಕೆ ಹೋಲಿಸಿದೆ ಉತ್ತರ ಭಾರತದ ಮುಸ್ಲಿಮರು ಶೈಕ್ಷಣಿಕವಾಗಿ ಹಿಂದುಳಿದಿದ್ದು ಸತ್ಯವಾದರೂ ಈಗ ಅವರಲ್ಲಿ ಜಾಗೃತಿಯುಂಟಾಗುತ್ತಿದೆ. ಎಂದರು. ನಮ್ಮ ಸಂವಿಧಾನ ನಮಗೆ ಎಲ್ಲ ರೀತಿಯ ಹಕ್ಕು ನೀಡಿರುವಾಗ ನಾವು ಅದನ್ನು ಪಡೆಯುವಲ್ಲಿ ವಿಫಲರಾದರೆ ಯಾರ ತಪ್ಪು ಎಂದು ಪ್ರಶ್ನಿಸಿದ ಅವರು ನಾವು ನಮ್ಮ ಸಂವಿಧಾನಬದ್ಧ ಹಕ್ಕುಗಳಿಗಾಗಿ ಹೋರಾಡಬೇಕು ಎಂದರು. ಮಸ್ಲಿಮರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು. ಈಗ ನಮ್ಮನ್ನು ರಕ್ಷಿಸಲು ಆಕಾಶದಿಂದ ಸಹಾಯ ಒದಗಿಬರುವುದಿಲ್ಲ ಎಂದರು. ಪ್ರಸ್ತುತ ದೇಶದ ರಾಜಕೀಯ ಸ್ಥಿತಿಗತಿಗಳ ಕುರಿತು ಮಾತನಾಡಿದ ಅವರು,  ಪ್ರಜಾಪ್ರಭುತ್ವ ರೀತಿಯಲ್ಲಿ ಆಯ್ಕೆಗೊಂಡವರನ್ನು ಗೌರವಿಸಬೇಕು. ಅವರನ್ನು ಮನೆಗೆಕಳುಹಿಸುವ ವ್ಯವಸ್ಥೆಯೂ ಪ್ರಜಾಪ್ರಭುತ್ವ ರೀತಿಯಲ್ಲೇ ಅಗಬೇಕು. ನಾವು ಕೇವಲ ವಾಟ್ಸಪ್ ಮತ್ತು ಫೇಸ್ಬುಕ್ ಗಳಲ್ಲಿ ಹಾಸ್ಯ ಮಾಡುತ್ತ ಕಾಲಕಳೆಯುವುದರಲ್ಲೇ ವ್ಯರ್ಥರಾಗಿದ್ದೇವೆ, ದೇಶದಲ್ಲಿ ಮುಸ್ಲಿಮರ ಮೇಲೆ ದಿನೆ ದಿನೆ ನಡೆಯುತ್ತಿರುವ ದೌರ್ಜನ್ಯಗಳು ಹೆಚ್ಚಾಗತೊಡಗಿವೆ, ಸಂಖ್ಯೆಯಲ್ಲಿ ಹೆಚ್ಚಿದ್ದರೂ ನಾವಿಂದು ತೂಕಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ನಾವು ಕುರ್‌ಆನಿ ಶಿಕ್ಷಣಗಳನ್ನು ಮರೆತಿದ್ದೇವೆ. ಹಿಂದೇ ಮುಸ್ಲಿಮರು ಸಂಖ್ಯೆಯಲ್ಲಿ ಅಲ್ಪರಾಗಿದ್ದರೂ ಅವರು ಜಗತ್ತನ್ನೂ ಆಳಿದರು. ಇಂದು ನಾಯಕತ್ವದಿಂದ ನಮ್ಮಿಂದ ದೂರಾವಾಗಿದೆ. ಕಳೆದುಕೊಂಡಿರುವ ಗೌರವ ಸನ್ಮಾನಗಳನ್ನು ಮತ್ತೇ ನಾವು ಮರಳಿಪಡೆಯಬೇಕಾದರೆ ಕುರಾನಿನ ಶಿಕ್ಷಣಕ್ಕನುಗುಣವಾಗಿ ಬದುಕುವುದನ್ನು ಕಲಿತುಕೊಳ್ಳಬೇಕು ಎಂದು ಕರೆ ನೀಡಿದರು. 

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ.ಕಾದರ್ ಮಾತನಾಡಿ, ನಾಲ್ಕುಗೋಡೆಯ ವರ್ಗದ ಕೋಣೆಯಲ್ಲಿರುವ, ಮೈದಾನ ಆಟ ಆಡುತ್ತಿರುವ ವಿದ್ಯಾರ್ಥಿವರ್ಗ ಬಲಿಷ್ಠರಾದಾಗ ಮಾತ್ರ ದೇಶ ಬಲಿಷ್ಠವಾಗುವುದು, ನಾವಿಂದು ದೇಶಪ್ರೇಮದ ಬಗ್ಗೆ ಮಾತನಾಡುತ್ತೇವೆ. ಕೇವಲ ಮೈಕ್ ಮುಂದೆ ಬೊಬ್ಬೆ ಹೊಡೆಯುವುದರಿಂದ ದೇಶಪ್ರೇಮ ಬೆಳೆಯುವುದಿಲ್ಲ ಎಂದರು. 

ರಾಬಿತಾ ಸಂಸ್ಥೆಯ ಮಾಜಿ ಅಧ್ಯಕ್ಷ ಸಾದಿಕ್ ಪಿಲ್ಲೂರ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಯೂನೂಸ್ ಕಾಝಿಯ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಮೌಲಾನ ಸೈಯ್ಯದ್ ತನ್ವೀರ್ ಹಾಗೂ ಯೂಸೂಫ್ ಬರ್ಮಾವರ್ ಕಾರ್ಯಕ್ರಮ ನಿರೂಪಿಸಿದರು. 

ವೇದಿಕೆಯಲ್ಲಿ ಮೌಲಾನ ಅಬ್ದುಲ್ ಅಝೀಮ್ ಕಾಝೀಯಾ, ಖಲಿಫಾ ಜಮಾ‌ಅತುಲ್ ಮುಸ್ಲಿಮೀನ್ ಪ್ರಧಾನ ಕಾಝಿ ಮೌಲಾನ ಕ್ವಾಜಾಮುಹಿದ್ದೀನ್ ಅಕ್ರಮಿ ಮದನಿ, ರಾಬಿತಾ ಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ ಮುಹಿದ್ದೀನ್ ರುಕ್ನುದ್ದೀನ್, ತಂಝೀಮ್ ಅಧ್ಯಕ್ಷ ಮುಝಮ್ಮಿಲ್ ಕಾಝಿಯಾ ಅಂಜುಮನ್ ಸಂಸ್ಥೆಯ ಸೈಯ್ಯದ್ ಅಬ್ದುಲ್ ರಹಮಾನ್ ಬಾತಿನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

ಈ ಸಂದರ್ಭದಲ್ಲಿ ನ್ಯೂಶಮ್ಸ್ ಸ್ಕೂಲ್ ಶಾಲೆಗೆ ಬೆಸ್ಟ್ ಸ್ಕೂಲ್ ಅವಾರ್ಡ್ ನೀಡಿ ಪುರಸ್ಕರಿಸಲಾಯಿತು. 

 ರಾಬಿತಾ ಸೂಸೈಟಿಯ ಬೆಸ್ಟ್ ಸ್ಕೂಲ್ ಅವಾರ್ಡ್‌ನ್ನು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾ ಯು.ಟಿ.ಕಾದರ್ ಶಮ್ಸ್ ಸ್ಕಾಲ್ ಆಡಳಿತ ಮಂಡಳಿ ಸದಸ್ಯರಿಗೆ ನೀಡುತ್ತಿರುವುದು.
 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...