ಭಟ್ಕಳ: ಪುರವರ್ಗದ ಕನ್ನಡ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ ನ.19ರಂದು ಉದ್ಘಾಟನೆ
ಭಟ್ಕಳ: ಶತಮಾನೋತ್ಸವದ ಸಮೀಪವಿರುವ ತಾಲೂಕಿನ ಪುರವರ್ಗದ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕಲ್ಪಿಸುವಿಕೆ ಮತ್ತು ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಅಳವಡಿಕೆ ಉದ್ದೇಶಕ್ಕಾಗಿ ಹಳೆ ವಿದ್ಯಾರ್ಥಿ ಸಂಘ ರಚಿಸಿದ್ದು ನ.19ರಂದು ಉದ್ಘಾಟನೆಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ ಉಚ್ಛನ್ಯಾಯಾಲಯದ ಹಿರಿಯ ನ್ಯಾಯವಾದಿ ಆರ್. ನಾಗೇಂದ್ರ ನಾಯ್ಕ ಉದ್ಘಾಟಿಸುವರು. ಅಧ್ಯಕ್ಷ ಮೃತ್ಯುಂಜಯ ಆಚಾರ್ಯರವರು ಅಧ್ಯಕ್ಷತೆ ವಹಿಸುವರು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಮರಿಸ್ವಾಮಿ, ಗೊರ್ಟೆ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾದ್ಯಾಯ ರಾಘವೇಂದ್ರ ನಾಯ್ಕ, ಉದ್ಯಮಿ ಈರಪ್ಪ ಗರ್ಡೀಕರ, ಪಂಚಾಯತ ಅಭಿವೃದ್ಧಿ ಅಧಿಕಾರಿ ಕರಿಯಪ್ಪ ನಾಯ್ಕ, ಮುನ್ನವರ ಪೇಶಮಾಮ್, ಉದಯ ನಾಯ್ಕ, ಸುರೇಶ ನಾಯ್ಕ, ಮೆರಿ ರೊಡ್ರಿಗಸ್, ಮಾದೇವ ನಾಯ್ಕ ಮತ್ತಿತರ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದೂ ತಿಳಿಸಲಾಗಿದೆ.
ಅದೇ ದಿನ ಬೆಳಿಗ್ಗೆ ಹಳೆ ವಿದ್ಯಾರ್ಥಿಗಳ ಸಮ್ಮಿಲನದಲ್ಲಿ ಸಮಾಜ ಸೇವಕ ಹಾಗೂ ಸಮಿತಿಯ ಗೌರವಾಧ್ಯಕ್ಷ ಅಣ್ಣಪ್ಪ ಅಬ್ಬಿಹಿತ್ತಲ ಅವರ ಅಧ್ಯಕ್ಷತೆಯಲ್ಲಿ "ಚಿಂತನ-ಮಂಥನ" ಕಾರ್ಯಕ್ರಮ, ಸಂಜೆ ಕ್ರೀಡಾಕೂಟ, ಶಾಲಾ ವಿದ್ಯಾರ್ಥಿಗಳಿಂದ ಮನರಂಜನೆ ರಾತ್ರಿ ವಿಶ್ವದೀಪ ಕಲಾ ನಿಕೇತನ ಸಂಸ್ಥೆ ಬೆಳಕೆಯವರಿಂದ "ಡಾನ್ಸ್ ಧಮಾಕ" ಕಾರ್ಯಕ್ರಮ ನಡೆಯಲಿದೆ ಎಂದೂ ಸಂಘಟಕರು ತಿಳಿಸಿದ್ದಾರೆ.