ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕಂದಾಯ ನಿರೀಕ್ಷಕರ ಭೇಟಿ

Source: sonews | By Staff Correspondent | Published on 18th September 2017, 11:42 PM | Coastal News | Don't Miss |

ಭಟ್ಕಳ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕಂದಾಯ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಿಗರು ಇಲ್ಲಿನ ಸಾಗರ ರಸ್ತೆಯ ಘನ ತ್ಯಾಜ್ಯ ವಿಲೇವಾರಿಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. 
ಪಟ್ಟಣ ವ್ಯಾಪ್ತಿಯಲ್ಲಿನ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರು ಹಾಜರಾಗಿ ಪ್ರತಿನಿತ್ಯ ಘನತ್ಯಾಜ್ಯ ವಾಹನ ಪರಿಶೀಲನೆ ಜೊತೆಗೆ ಹಸಿ ಮತ್ತು ಒಣ ಕಸದ ಕುರಿತಂತೆ ವರದಿ ನೀಡಬೇಕೆಂದು ಸೆ.೧೪ ರಂದು ಜಿಲ್ಲಾಧಿಕಾರಿ ಆದೇಶಿಸಿದ್ದರು.  ಭಟ್ಕಳ ವ್ಯಾಪ್ತಿಯಲ್ಲಿನ ತಾಲುಕಾ ಕಂದಾಯ ನಿರೀಕ್ಷಕ ರಾಜು ಕೆ. ನಾಯ್ಕ ಮತ್ತು ಗ್ರಾಮ ಲೆಕ್ಕಿಗ ಶಂಭು ಕೆ. ಸೋಮವಾರದಂದು ಘsಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮನೆ ಮನೆಯಿಂದ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತಿದ್ದು, ಈ ಕುರಿತು ತಾಲೂಕಾ ವ್ಯಾಪ್ತಿಯಲ್ಲಿ ನೆಲ ಭರ್ತಿ ಸ್ಥಳ ಪರಿಶೀಲನೆ ಕಾರ್ಯವನ್ನು ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರು ಪ್ರತಿನಿತ್ಯ ಬೆಳಿಗ್ಗೆ ೭ ರಿಂದ ೧೨ ಗಂಟೆಯವರೆಗೆ ಮತ್ತು ಮಧ್ಯಾಹ್ನ ೩ ಗಂಟೆಯಿಂದ ೭ ಗಂಟೆಯವರೆಗೆ ನಡೆಸಬೇಕೆಂದು ಜಿಲ್ಲಾಧಿಕಾರಿಗಳಿಂದ ಆದೇಶ ನೀಡಲಾಗಿದೆ. ಸೋಮವಾರದಂದು ತಾಲುಕಾ ಕಂದಾಯ ನಿರೀಕ್ಷಕ ರಾಜು ಕೆ. ನಾಯ್ಕ ಮತ್ತು ಗ್ರಾಮ ಲೆಕ್ಕಿಗ ಶಂಭು ಕೆ. ಬೆಳಿಗ್ಗೆ ಸಾಗರ ರಸ್ತೆಯಲ್ಲಿನ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ನಗರ ವ್ಯಾಪ್ತಿಯಲ್ಲಿನ ಘನತ್ಯಾಜ್ಯವನ್ನು ಸಂಗ್ರಹಿಸುವ ವಾಹನಗಳನ್ನು, ಸಿಬ್ಬಂದಿಯು ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸುವ ಬಗ್ಗೆ ಪರಿಶೀಲಿಸಿ ವಿಂಗಡಣೆ ಮಾಡಿ ಸಿಬ್ಬಂದಿಗಳಿಗೆ ಸರಿಯಾದ ಸೂಚನೆ ನೀಡಿದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...