ಇದೇ ಬರುವ ದಿನಾಂಕ ಮೇ 27ನೇ ತಾರೀಖಿನ ಶನಿವಾರದಂದು ಭಟ್ಕಳದ ಗೋಪಾಲಕೃಷ್ಣ ರಸ್ತೆಯಲ್ಲಿರುವ ವೀರಮಾತಾ ಶ್ರೀ ಶ್ರೀಧರ ಪದ್ಮಾವತಿ ದೇವಿಯ ವರ್ಧಂತಿ ಉತ್ಸವವು ನಡೆಯಲಿದ್ದು ಆ ಪ್ರಯುಕ್ತ ವಿಶೇಷ ಪೂಜೆ ಪುನಸ್ಕಾರಗಳು ನಡೆಯಲಿದ್ದು ಕಲಾವೃದ್ಧಿ ಹೋಮ, ಕುಂಭಾಭಿಷೇಕ, ಕುಂಕುಮಾರ್ಚನೆ ಹಾಗೂ ಮಧ್ಯಾಹ್ನ ಮಹಾಪೂಜೆ,ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೇ ನಡೆಯಲಿದೆ ಎಂದು ದೇವಾಲಯದ ಧರ್ಮದರ್ಶಿಗಳು ತಿಳಿಸಿದ್ದಾರಲ್ಲದೇ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ದೇವರ ಪ್ರಸಾದ ಸ್ವೀಕರಿಸಿ ಕೃತಾರ್ಥರಾಗಲು ಕೋರಿದ್ದಾರೆ.