ರುಧ್ರಭೂಮಿಯಲ್ಲಿ ಬೆಂಕಿ ;ತಪ್ಪಿದ ಭಾರಿ ಅನಾಹುತ

Source: S O News service | By Staff Correspondent | Published on 17th February 2017, 12:07 AM | Coastal News | Incidents | Don't Miss |

ಭಟ್ಕಳ ತಾಲೂಕಿನ ಮಣ್ಕುಳಿಯ ಇಂಡಿಯನ್ ಓಯಿಲ್ ಪೆಟ್ರೋಲ್ ಬಂಕ್ ಹಿಂಬದಿಯಲ್ಲಿನ ೧ ಎಕರೆಗೂ ಅಧಿಕ ವಿಸ್ತೀರ್ಣದ ಹಿಂದೂ ರುಧ್ರಭೂಮಿಯಲ್ಲಿ ಗುರುವಾರದಂದು ಮಧ್ಯಾಹ್ನ ಆಕಸ್ಮಾತ್ ಬೆಂಕಿ ತಗುಲಿದ್ದು, ಆಗಬಹುದಾದ ದೊಡ್ಡ ಅನಾಹುತ ಸ್ವಲ್ಪದರಲ್ಲೇ ತಪ್ಪಿತ್ತು.

ತಾಲೂಕಿನ ಮಣ್ಕುಳಿಯ ಹಿಂದೂ ರುಧ್ರಭೂಮಿಯಲ್ಲಿ ಗುರುವಾರದಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿದ್ದು, ರುದ್ರಭೂಮಿಯಲ್ಲಿರುವ ಗಿಡ ಮರಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬೆಂಕಿಯೂ ಸಂಪೂರ್ಣ ಸ್ಮಶಾನವನ್ನು ಆವರಿಸುತ್ತಾ, ಇಲ್ಲಿನ ಪೆಟ್ರೋಲ್ ಬಂಕ್ ಬಳಿಯ ತೆಂಗಿನ ಮರಕ್ಕೂ ತಗುಲಿತ್ತು. ಸ್ಥಳಕ್ಕೆ ಭಟ್ಕಳ ಶಹರ ಪೋಲೀಸ್ ಪೋಲೀಸ್‌ರು ಧಾವಿಸಿದ್ದು, ಅಗ್ನಿಶಾಮಕ ದಳದರನ್ನು ಸ್ಥಳಕ್ಕೆ ಕರೆಯಿಸಿ ಬೆಂಕಿಯನ್ನು ನಂದಿಸಲಾಯಿತು. ಸಂಧರ್ಭಕ್ಕೆ ಸರಿಯಾಗಿ ಬೆಂಕಿ ನಂದಿಸದಿದ್ದರೆ ಪೆಟ್ರೋಲ್ ಬಂಕ್‌ನ್ನು ಬೆಂಕಿ ಆವರಿಸಿಕೊಂಡು ದೊಡ್ಡ ಅವಾಹುತವೇ ಸಂಭವಿಸುತ್ತಿತ್ತು. ಇದೇ ಮಾರ್ಗವಾಗಿ ತೆರಳುವ ಯಾರೋ ದಾರಿಹೋಕರು ಸೇದಿ ಎಸೆದ ಬೀಡಿ ಅಥವಾ ಸಿಗರೇಟ ಈ ಅವಗಢಕ್ಕೆ ಕಾರಣ ಎಂದು ಪೋಲೀಸರಿಂದ ತಿಳಿದುಬಂದಿದೆ. ಹಾಗೆಯೇ ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ಆರಂಭವಾದ ಸಣ್ಣ ಪ್ರಮಾಣದ ಸುಳಿಗಾಳಿಗಳಿಯೂ ಕಾಣಿಸಿಕೊಂಡ ಬೆಂಕಿಯ ಪ್ರಮಾಣ ಹೆಚ್ಚಾಗಲು ಕಾರಣವಾಯಿತು ಎನ್ನಲಾಗಿದೆ. ಸ್ಥಳಕ್ಕೆ ಭಟ್ಕಳ ಶಹರ ಪೋಲೀಸ್ ಠಾಣೆ ಪಿ‌ಎಸೈ ಕುಡಗುಂಟಿ, ಎ‌ಎಸೈ ಪರಮೇಶ್ವರ ಹಾಗೂ ಪೋಲೀಸ್ ಸಿಬ್ಬಂದಿಗಳು ಇದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...