ಯಲ್ವಡಿಕವೂರ ವ್ಯಾಪ್ತಿಯ ವಿವಿಧೆಡೆ ಸರಕಾರಿ ಹಾಡಿ ಅತಿಕ್ರಮಣ ತೆರವು ಕಾರ್ಯ’

Source: sonews | By Staff Correspondent | Published on 6th December 2018, 10:38 PM | Coastal News | Don't Miss |

ಭಟ್ಕಳ: ಜಿಲ್ಲಾಧಿಕಾರಿಗಳಿಗೆ ವಾಟ್ಸಾಪ್ ಮೂಲಕ ನೀಡಲಾದ ದೂರಿನ್ವಯ ಗುರುವಾರದಂದು ತಹಸೀಲ್ದಾರ ಶಂಕರ ಗೌಡಿ ನೇತೃತ್ವದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ತಾಲೂಕಿನ ಯಲ್ವಡಿಕವೂರ ಗ್ರಾಮ ಪಂಚಾಯತ ವ್ಯಾಪ್ತಿಯ ವಿವಿಧ ಕಡೆಯ ಸರಕಾರಿ ಹಾಡಿ ಜಾಗದಲ್ಲಿನ ಜಮೀನನ್ನು ಪೊಲೀಸ್ ಭದ್ರತೆಯಲ್ಲಿ ಖುಲ್ಲಾ ಪಡಿಸಿದರು. 

ಯಲ್ವಡಿಕವೂರು ಪಂಚಾಯತ ವ್ಯಾಪ್ತಿಯ ಸರ್ಪನಕಟ್ಟೆ ಗ್ರಾಮದ ಸರ್ವೇ ನಂ. 217/ಅ ರಲ್ಲಿನ ಕೋಣಾರ ರಸ್ತೆಯಲ್ಲಿ ನಾರಾಯಣ ವೆಂಕ್ಟಯ್ಯ ನಾಯ್ಕ ಎನ್ನುವವರು ಕಟ್ಟಡ ನಿರ್ಮಾಣಕ್ಕಾಗಿ 10 ಫಿಲ್ಲರ ನಿರ್ಮಿಸಿದ್ದು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ಮಾಡಲಾಯಿತು. ಹಾಗೂ ಸರ್ಪನಕಟ್ಟೆ ಗ್ರಾಮದ ಹನುಮಂತ ನಾರಾಯಣ ನಾಯ್ಕ, ನಾಗಮ್ಮ ಸೋಮಯ್ಯ ನಾಯ್ಕ, ಮಂಜಪ್ಪ ಶನಿಯಾರ ನಾಯ್ಕ ಎನ್ನುವವರು 12 ಅಂಗಡಿ ಮಳಿಗೆಯನ್ನು ನಿರ್ಮಿಸಿದ್ದನ್ನು ಕುದ್ದು ಅಧಿಕಾರಿಗಳೇ ತೆರಳಿ ನೆಲಸಮ ಗೊಳಿಸಲಾಯಿತು.

ಇನ್ನು ಇದೇ ಪಂಚಾಯತ ವ್ಯಾಪ್ತಿಯ ಗೋಳಿಬಿಳ್ಳುರು ಗ್ರಾಮದ ಸರ್ವೇ ನಂ. 70ರಲ್ಲಿ ರವಿ ಮಾಸ್ತಪ್ಪ ನಾಯ್ಕ ಎನ್ನುವವರಿಗೆ ಸೇರಿದ ನಿರ್ಮಾಣ ಹಂತದಲ್ಲಿನ ಮನೆಯನ್ನು ಅಧಿಕಾರಿಗಳು ತೆರವುಗೊಳಿಸಿದರು. 

ಈ ಹಿಂದೆ ಕಟ್ಟಡ ನಿರ್ಮಾಣ ಮಾಡದಂತೆ ಕಂದಾಯ ಇಲಾಖೆ ಅಧಿಕಾರಿಗಳು ಸಾಕಷ್ಟು ಬಾರಿ ಎಚ್ಚರಿಸಿದ್ದು ಕ್ಯಾರೆ ಎನ್ನದೇ ಕಟ್ಟಡ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಿಲ್ಲವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದರು. 

ಕಾರ್ಯಚರಣೆಯಲ್ಲಿ ತಹಸೀಲ್ದಾರ ಶಂಕರ ಗೌಡಿ, ಕಂದಾಯ ಅಧಿಕಾರಿ ಗಣಪತಿ ಮೇತ್ರಿ, ಗ್ರಾಮಾಂತರ ಪೊಲೀಸ್ ಠಾಣಾ ಎಎಸೈ ಅಣ್ಣಪ್ಪ ಮೋಗೇರ, ಗ್ರಾಮ ಲೆಕ್ಕಾಧಿಕಾರಿಗಳಾದ ವಿಶ್ವನಾಥ ಗಾಂವಕ್ಕರ, ಅಣ್ಣಯ್ಯ ಲಮಾಣಿ, ಕೆ.ಶಂಭು, ಸಲ್ಮಾನ ಖಾನ್, ಮನೋಜ ಗಾಂಜೇಕರ ಸೇರಿದಂತೆ ಗ್ರಾಮ ಸಹಾಯಕರು ಇದ್ದರು.

 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...