ಆಸ್ಪತ್ರೆಗೆ ತೆರಳಿದವರ ಬ್ಯಾಗ್ ದೋಚಿದ ಕಳ್ಳರು

Source: SO News | By MV Bhatkal | Published on 24th July 2018, 8:43 PM | Coastal News |

ಭಟ್ಕಳ: ಆಸ್ಪತ್ರೆಗೆಂದು ರೈಲಿನಲ್ಲಿ ತೆರಳಿದ್ದವರ ಚಿನ್ನಾಭರಣ, ನಗದು ಇದ್ದು ಬ್ಯಾಗ್ ಅನ್ನು ಕಳವು ಮಾಡಿರುವ ಘಟನೆ ನಿನ್ನೆ ಮುರುಡೇಶ್ವರ ರೈಲು ನಿಲ್ದಾಣದಲ್ಲಿ ನಡೆದಿದೆ. 

ಕಾರವಾರದ ನಂದನಗದ್ದಾದ ನಿವಾಸಿ ರಾಮದಾಸ ನಾರಾಯಣ ಕಾಣಕೋಣಕರ್ ಎಂಬುವವರು ಕುಟುಂಬದೊಂದಿಗೆ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ನೇತ್ರಾವತಿ ಎಕ್ಸಪ್ರೆಸ್ (ರೈ.ನಂ: 14345) ನಲ್ಲಿ ಕಾರವಾರದಿಂದ ತೆರಳಿದ್ದರು‌.ಈ  ವೇಳೆ ರೈಲು ಮುರ್ಡೇಶ್ವರ ನಿಲ್ದಾಣದ ಸಮೀಪ ನಿಧಾನವಾಗಿ ಚಲಿಸುತ್ತಿರುವಾಗ ಅವರ ಪತ್ನಿ ರೇಷ್ಮಾರ ವ್ಯಾನಿಟಿ ಬ್ಯಾಗ್ ಅನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ. ಬ್ಯಾಗಿನಲ್ಲಿ 8 ಲಕ್ಷ ರೂ. ಮೌಲ್ಯದ 400 ಗ್ರಾಂ ಬಂಗಾರದ ಆಭರಣ ಹಾಗೂ 35 ಸಾವಿರ ನಗದು ಇತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...