ಭಟ್ಕಳ: ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಗುರುತಿಸಿ, ರಾಜ್ಯದ ಅತ್ಯುತ್ತಮ ಅರ್ಬನ್ ಕೋ-ಆಪರೇಟಿವ್ ಬ್ಯಾಂಕುಗಳಲ್ಲಿ ಒಂದಾದ ಭಟಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕನ್ನು “ಅತ್ಯುತ್ತಮ ಸಾಧನಾ ಪ್ರಶಸ್ತಿ” ಗೆ 65 ನೇ ಅಖಿಲ ಭಾರತ ಸಹಕಾರ ಸಪ್ತಾಹ 2018, ಆಚರಣಾ ಸಮಿತಿ, ಶಿರಸಿ ಇವರು ಆಯ್ಕೆ ಮಾಡಿರುತ್ತಾರೆ.
ಈ ಪ್ರಶಸ್ತಿಗೆ ಆಯ್ಕೆಗೊಂಡ ಭಟಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಅಬ್ದುಲ ಮಜೀದ ಚೌಗುಲೆಯವರು ಸಹಕಾರ ಇಲಾಖೆ, ಕೆ.ಡಿ.ಸಿ.ಸಿ. ಬ್ಯಾಂಕ್, ಶಿರಸಿ, ತೋಟಗಾರ್ಸ ಸೇಲ್ಸ ಕೋ-ಆಪ. ಸೊಸೈಟಿ ಲಿ., ಶಿರಸಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರ ನೇತೃತ್ವದಲ್ಲಿ ದಿನಾಂಕ 21.11.2018 ರಂದು ತೋಟಗಾರ್ಸ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿಮಿಟೆಡ್, ಶಿರಸಿಯಲ್ಲಿ ನಡೆಯಲಿರುವ 65 ನೇ ಅಖಿಲ ಭಾರತ ಸಹಕಾರ ಸಪ್ತಾಹ-2018 ಈ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಬ್ಯಾಂಕಿನ ಪ್ರಧಾನ ಕಾರ್ಯನಿರ್ವಾಹಕ ಎಸ್.ಎ.ರಜಾಕರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.