ಅನಾರೋಗ್ಯದ ಕುರಿತು ಆತಂಕ ಮಹಿಳೆಯಿಂದ ಆತ್ಮಹತ್ಯೆ
ಭಟ್ಕಳ: ತಮ್ಮ ಮಕ್ಕಳ ಅನಾರೋಗ್ಯದ ಕುರಿತು ಆತಂಕಿತಳಾದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಗೈದ ಘಟನೆ ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ ವ್ಯಾಪ್ತಿಯ ವೆಂಕಟಾಪುರದಲ್ಲಿ ಬುಧವಾರ ನಡೆದಿದೆ.
ಈಕೆಗೆ ಇಬ್ಬರು ಮಕ್ಕಳಿದ್ದು, ಮಗ ಅಂಗವಿಕಲನಾಗಿದ್ದರೆ, ಮಗಳು ಬುದ್ದಿಮಾಂದ್ಯತೆಗೆ ಒಳಗಾಗಿದ್ದಳು. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಕೊರಗುತ್ತಿದ್ದ ಮಹಿಳೆ ಮಂಗಳವಾರ ರಾತ್ರಿ ೮.೩೦ ಗಂಟೆಯಿಂದ ಬೆಳಿಗ್ಗೆ ೬ರ ಅವಧಿಯಲ್ಲಿ ಆತ್ಮಹತ್ಯೆ ಕೃತ್ಯ ಎಸಗಿದ್ದಾಳೆ ಎಂದು ತಿಳಿದು ಬಂದಿದೆ. ಮೃತ ಮಹಿಳೆಯನ್ನು ತಾಲೂಕಿನ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.