ಭಟ್ಕಳ: ಇಲ್ಲಿನ ಬೆಳಕೆಯಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ದೀಪಕ ಅಶೋಕ ಶೇಟ್ ಈತನು ಉತ್ತಮ ಪ್ರದರ್ಶನ ತೋರಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಈತನ ಸಾಧನೆಯನ್ನು ಶಾಲಾ ಮುಖ್ಯ ಶಿಕ್ಷಕಿ ರೂಪಾ ಆರ್. ಖಾರ್ವಿ, ದೈಹಿಕ ಶಿಕ್ಷಣ ಶಿಕ್ಷಕ ಮಹೇಶ ಗೊಂಡ, ಶಿಕ್ಷಕ ವೃಂದ ಹಾಗೂ ಪಾಲಕರು ಅಭಿನಂದಿಸಿದ್ದಾರೆ.