ಐರೋಪ್ಯ ರಾಷ್ಟ್ರಗಳ ಶಿಕ್ಷಣ ವ್ಯವಸ್ಥೆ ಮನುಷ್ಯರನ್ನು ಧರ್ಮದ ಶತ್ರುಗಳನ್ನಾಗಿ ರೂಪಿಸುತ್ತಿದೆ-ಮೌಲಾನ ರಾಬೆ‌ಅ ನದ್ವಿ

Source: S O News service | By Staff Correspondent | Published on 21st December 2016, 6:42 PM | Coastal News | Islam | Don't Miss |

ಭಟ್ಕಳ: ಪ್ರಸಕ್ತ ಪಾಶ್ಚಾತ್ಯ ಶಿಕ್ಷಣ ವ್ಯವಸ್ಥೆಯ ಕುರಿತಂತೆ ಕಠು ವಿಮರ್ಶೆ ಮಾಡಿದ ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ಅಧ್ಯಕ್ಷ ಮೌಲಾನಾ  ಸೈಯ್ಯದ್ ಮುಹಮ್ಮದ್ ರಾಬೆ‌ಅ ಹಸನಿ ನದ್ವಿ, ಐರೋಪ್ಯ ರಾಷ್ಟ್ರಗಳ ಶಿಕ್ಷಣ ವ್ಯವಸ್ಥೆ ಮನುಷ್ಯರನ್ನು ಧರ್ಮದ ಶತ್ರುಗಳನ್ನಾಗಿ ರೂಪಿಸುತ್ತಿದೆ ಎಂದು ಹೇಳಿದರು.

ಅವರು ಬುಧವಾರ ಇಲ್ಲಿನ ಅಲಿ ಪಬ್ಲಿಕ್ ಸ್ಕೂಲ್ ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ಶೈಕ್ಷಣಿಕ ವಿಚಾರ ಗೋಷ್ಟಿಯಲ್ಲಿ ತಮ್ಮ ವಿಚಾರಗಳನ್ನು ವ್ಯಕ್ತಪಡಿಸುತ್ತಿದ್ದರು. ಶಿಕ್ಷಣ ಪಠ್ಯಕ್ರಮದಲ್ಲಿನ  ಉಡಾಳತನವು ಪಸ್ತುತ ಕೆಡುಕುಗಳಿಗೆ ಕಾರಣವಾಗುತ್ತಿದ್ದು ನವ ಪೀಳಿಗೆಯ ಮನಸ್ಸುಗಳನ್ನು ಕಲೂಷಿತಗೊಳಿಸುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದರು. 

ದೇಶದಲ್ಲಿ ಬದಲಾಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ನವಪೀಳಿಗೆಯಲ್ಲಿ ಇಸ್ಲಾಮಿನ ನೈಜ ಚಿಂತನೆಗಳನ್ನು  ಉಳಿಸಿ ಬೆಳೆಸುವುದರ ಜೊತೆಗೆ ಅವರನ್ನು ದೇಶದ ಅತ್ಯುನ್ನತ ನಾಗರೀಕರನ್ನಾಗಿ ರೂಪಿಸುವಲ್ಲಿ ಚಿಂತನೆ ನಡೆಸಬೇಕಾಗಿದೆ ಎಂದು ವಿಚಾರಗೋಷ್ಟಿಯಲ್ಲಿ ಅಭಿಪ್ರಾಯಪಟ್ಟ ಶಿಕ್ಷಣ ತಜ್ಞರು, ನವಪೀಳಿಗೆಯ ಮನಸ್ಸುಗಳಲ್ಲಿ ಇಸ್ಲಾಮ್ ಕುರಿತಂತೆ  ತಪ್ಪು ಕಲ್ಪನೆಗಳು ಜನ್ಮತಾಳುತ್ತಿರುವ ಕುರಿತು ಆತಂಕವ್ಯಕ್ತಪಡಿಸಿದರು. 

ಶಿಕ್ಷಣ ತಜ್ಞ ಡಾ.ವಲಿರಹ್ಮಾನಿ, ಲಖ್ನೋ ನದ್ವತುಲ್ ಉಲೇಮಾದ ವ್ಯವಸ್ಥಾಪಕ ಮೌಲಾನ ವಾಝ್ಹೆ ರಷೀದ್ ನದ್ವಿ ಜಮಾ‌ಅತೆ ಇಸ್ಲಾಮಿ ಹಿಂದ್ ರಾಷ್ಟ್ರೀಯ ಉಪಾಧ್ಯಕ್ಷ ಸೈಯ್ಯದ್ ಸಾದುಲ್ಲಾ ಹುಸೇನಿ ಸೇರಿದಂತೆ ದೇಶದ ವಿವಿಧ ಶಿಕ್ಷಣ ಸಂಸ್ಥೆ, ವಿಶ್ವವಿದ್ಯಾಲಯ ಹಾಗೂ ಮದರಸಾಗಳ ೨೫೦ಕ್ಕೂ ಹೆಚ್ಚು ಶಿಕ್ಷಣ ತಜ್ಞರು ವಿಚಾರಗೋಷ್ಠಿಯಲ್ಲಿ ಭಾಗವಹಿಸಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಈದ್-ಉಲ್-ಫಿತರ್ ಪ್ರತಿನಿಧಿಸುವ ಮೌಲ್ಯಗಳು; ಮನುಷ್ಯ ಪ್ರೇಮ, ಕರುಣೆ, ಅನುಕಂಪ  ಮತ್ತು ಸಹಾನುಭೂತಿ

ಕೋಮು ಧ್ರುವೀಕರಣ ಮತ್ತು ಧಾರ್ಮಿಕ ಅಸಹಿಷ್ಣುತೆಯ ಹಿನ್ನೆಲೆಯಲ್ಲಿ, ಈದ್-ಉಲ್-ಫಿತರ್‌ನ ಮಹತ್ವವು ಹೆಚ್ಚಿನ ಪ್ರಾಮುಖ್ಯತೆಯನ್ನು ...

ಭಟ್ಕಳ: ಕುರಾನ್ ಕಂಠಪಾಠ ಮಾಡಿದ ಮರ್ಕಝಿ ಖಲಿಫಾ ಜಮಾಅತುಲ್ ಮುಸ್ಲಿಮೀನ್ ಚೀಫ್ ಖಾಝಿ

ಭಟ್ಕಳ: ಇಲ್ಲಿನ ಖಲಿಫಾ ಮರ್ಕಝಿ ಜಮಾಅತುಲ್ ಮುಸ್ಲಿಮೀನ್ ನ ಚೀಫ್ ಖಾಜಿ ಹಾಗೂ ಜಾಮಿಯಾ ಇಸ್ಲಾಮಿ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಮೌಲಾನ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...