ಗ್ರ್ಯಾಂಡ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಟ್ಕಳದ ಯುವಕ

Source: sonews | By Staff Correspondent | Published on 11th November 2017, 12:42 AM | Coastal News | Sports News | Special Report | Don't Miss |

ಭಟ್ಕಳ: ಆರ್ಟ ಬೆಟಲ್ ಮಿಸ್ಟರ್ ಎಂಡ್ ಮಿಸ್ ಗ್ರ್ಯಾಂಡ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಮಿಂಚಿದ ಭಟ್ಕಳದ ಯುವಕ, ಮಿಸ್ಟರ್ ಸೌತ್ ಕರ್ನಾಟಕ ಆಗಿ ಹೊರಹೊಮ್ಮಿದ ವಿನು ಮಾನಕಾಮೆ, ಅತ್ಯಂತ ಚುರುಕಿನ ಯುವಕ ವಿನಾಯಕ ಮಾರುತಿ ಶೇಟ್ ಈತ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ಡಾನ್ಸ್, ನಾಟಕ, ಫೋಟೋಗ್ರಫಿಯಲ್ಲಿ ಹಾಗೂ ಕಿರುಚಿತ್ರ ತಯಾರಿಕೆಯಲ್ಲಿಯೂ ಕೂಡಾ ಆಸಕ್ತಿ ಹೊಂದಿದವನಾಗಿದ್ದಾನೆ.


ಆರ್ಟ ಬೆಟಲ್ ಮಿಸ್ಟರ್ ಎಂಡ್ ಮಿಸ್ ಗ್ರ್ಯಾಂಡ್ ಸೌತ್ ಇಂಡಿಯಾ ಇವರು ಬೆಂಗಳೂರಿನಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಎರ್ಪಡಿಸಿದ್ದ ಅಡಿಶನ್‍ನಲ್ಲಿ 300 ಜನ ಸಹ ಸ್ಪರ್ಧಿಗಳಲ್ಲಿ ಭಾಗವಹಿಸಿದ್ದ ಈತ ಅಂತಿಮವಾಗಿ 23ರಲ್ಲಿ ಓರ್ವನಾಗಿ ಹೊರ ಹೊಮ್ಮಿ ಸ್ಪರ್ಧೇಯ ಗ್ರ್ಯಾಂಡ್ ಫಿನಾಲೆಗೆ ಆಯ್ಕೆಯಾಗಿದ್ದಾನೆ. ಅಕ್ಟೋಬರ್‍ನಲ್ಲಿ ಮಂಗಳೂರಿನ ರಿವರ್‍ಡೇಯಲ್ಲಿ ನಡೆದ ಮಿಸ್ಟರ್ ಎಂಡ್ ಮಿಸ್ ಗ್ರಾಂಡ್ ಸೌತ್ ಇಂಡಿಯಾ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಮಿಸ್ಟರ್ ಸೌತ್ ಕರ್ನಾಟಕ ಆಗಿ ಹೊರ ಹೊಮ್ಮುವ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ.
ಕರ್ನಾಟಕ, ಕೇರಳ, ತಮಿಳುನಾಡು, ಆಂದ್ರ, ಗೋವಾಗಳಿಂದ ಸ್ಪರ್ಧಿಗಳು ಆಗಮಿಸಿದ್ದು ಅವರೆಲ್ಲನ್ನು ಹಿಂದಿಕ್ಕಿದ ವಿನು ಮಾನಕಾಮೆ ಕರ್ನಾಟಕ ಕೆಟಗರಿಯಿಂದ ಆಯ್ಕೆಯಾಗಿದ್ದು ಹೆಮ್ಮೆಯ ವಿಷಯವಾಗಿದೆ.
ಸ್ಪರ್ಧೆಯ ನಂತರ ನಗದು ಸೇರಿದಂತೆ ಪ್ರಶಸ್ತಿ ಪತ್ರವನ್ನು ವಿತರಿಸಿದ್ದು, ಈತ ಓರ್ವ ಭರವಸೆಯ ಯುವಕನಾಗಿ ಹೊರಹೊಮ್ಮುವಲ್ಲಿ ಯಶಸ್ವಿಯಾಗಿದ್ದಾನೆ.
ಸ್ಪರ್ಧೇಯಲ್ಲಿ ಕರ್ನಾಟಕದಿಂದ ಒಟ್ಟೂ 5 ಜನರಲ್ಲಿ ಮೊದಲಿಗನಾದ ಈತನಿಗೆ ಟಾಲೆಂಟ್ ರೌಂಡ್‍ನಲ್ಲಿ ಈತ ಬಿಡಿಸಿದ ಕರಾವಳಿಯ ಚಿತ್ರ ಎಲ್ಲರ ಗಮನ ಸೆಳೆದಿದ್ದರೆ, ಈತನ ಹಾಡು, ಡಾನ್ಸ್ ಕೂಡಾ ಗಮನ ಸೆಳೆದಿರುವುದು ಅಂತಿಮವಾಗಿ ವಿಜಯಿಯಾಗಲು ಕಾರಣವಾಗಿದೆ. ಜೊತೆಗೆ ಸ್ಫರ್ಧೇಯಲ್ಲಿ ಮುಖ್ಯವಾಗಿ ಟ್ರೇಡೀಶನಲ್ ರೌಂಡ್, ಪಾರ್ಟಿವೇರ್ ರೌಂಡ್, ಫ್ರೀವೇರ್ ಸೇರಿದಂತೆ ವಿವಿಧ ರೌಂಡ್ಸ್‍ಗಳಲ್ಲಿ ಕೂಡಾ ಈತ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾನೆ.
ಕರ್ನಾಟಕದಿಂದ ಮೈಸೂರು, ಮಂಡ್ಯ, ಬೆಂಗಳೂರುನಿಂದ ಬಂದಿದ್ದ ಸ್ಪರ್ಧಿಗಳಲ್ಲಿ ಈತ ಉತ್ತರ ಕನ್ನಡದವನಾಗಿದ್ದು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಭಟ್ಕಳದ ಸೋನಾರಕೇರಿಯ ಮಾರುತಿ ಎಂ.ಶೇಟ್ ಹಾಗೂ ಪ್ರೇಮಾ ಇವರ ಪುತ್ರನಾಗಿರುವ ಈತ ಇಲ್ಲಿನ ದೈವಜ್ಞ ಬ್ರಾಹ್ಮಣ ಸಮಾಜದ ಸಕ್ರಿಯ ಕಾರ್ಯಕರ್ತನೂ ಆಗಿದ್ದಾನೆ.
ಪ್ರಾಥಮಿಕ ಶಿಕ್ಷಣ ಹಂತದಿಂದಲೇ ಮೋಡೆಲಿಂಗ್, ಡಾನ್ಸ್, ಹಾಡು, ನಾಟಕ, ಪ್ರಕೃತಿಯಲ್ಲಿ ಅತ್ಯಂತ ಆಸಕ್ತಿ ಹೊಂದಿದ್ದ ಈತ ನಂತರದ ತನ್ನ ಶಾಲಾ ದಿನಗಳಲ್ಲಿ ಕೂಡಾ ಅವುಗಳನ್ನು ಮುಂದುವರಿಸಿಕೊಂಡು ಹೋಗಿದ್ದು ಆಸಕ್ತಿಯ ಹಿಂದೆ ಬಿದ್ದು ಒಂದು ಹಂತ ಯಶಸ್ಸು ಪಡೆದಿದ್ದಾನೆ.

ಕೃಪೆ:http://euttarakannada.in

Read These Next

ಜೆಡಿಎಸ್ ಮತ ಬುಟ್ಟಿಗೆ ’ಕೈ’ ಹಾಕಿದ ಅಂಜಲಿ ತಾಯಿ ; ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡರ ಮನೆಗೆ ಭೇಟಿ

ಅಂಕೋಲಾ: ಉ.ಕ ಲೋಕಸಭಾ ಕ್ಷೇತ್ರದ ಅಂಕೋಲಾ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಹಾಲಕ್ಕಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...