ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಮಾಂಕಾಳ್ ಅಭ್ಯರ್ಥಿ ಸಿಎಂ ಗ್ರೀನ್ ಸಿಗ್ನಲ್

Source: sonews | By Staff Correspondent | Published on 6th December 2017, 7:08 PM | Coastal News | Don't Miss |

ಭಟ್ಕಳ: ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗಾಗಿ 1200 ರೂ ಕೋಟಿ ಅನುದಾನ ಪಡೆದ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರು ಮಾಂಕಾಳ್ ವೈದ್ಯರೇ ಮುಂಬರುವ ವಿಧಾನಸಭಾ ಚುನಾವಣೆಯ ಕಾಂಗ್ರೇಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಲಿದ್ದಾರೆ ಎಂಬ ಗ್ರೀನ್ ಸಿಗ್ನಲ್ ಮುಖ್ಯಮಂತ್ರಿಗಳು ಬುಧವಾರ ಭಟ್ಕಳದಲ್ಲಿ ನಡೆದ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಸಮಾರಂಭದಲ್ಲಿ ನೀಡಿದರು. 
ತಮ್ಮ ಉದ್ಘಾಟನಾ ಭಾಷಣದುದ್ದಕ್ಕೂ ಮಾಂಕಾಳ್ ವೈದ್ಯರ ಪ್ರಮಾಣಿಕತೆ, ಕ್ರೀಯಶೀಲತೆಯನ್ನು ಹೊಗಳಿದ ಮುಖ್ಯಮಂತ್ರಿ ಇಂತಹ ವ್ಯಕ್ತಿ ಮುಂದಿ ಚುನಾವಣೆಗೆ ನಿಮಗೆ ಬೇಕಾ ಬೇಡ ಎಂದಾಗ ಸಭೀಕರ ಕರತಾಡನ ಹಾಗೂ ಘೋಷಣೆಗಳಿಂದ ಸ್ವಾಗತಿಸಿದರು. 
ಭಟ್ಕಳದ ಈ ದಿನ ಸುವಾರ್ಣಾಕ್ಷರಗಳಿಂದ ಬರೆದಿಡುವ ದಿನವಾಗಿದ್ದು ಇಷ್ಟೊಂದು ದೊಡ್ಡಪ್ರಮಾಣದ ಅನುದಾನ ಬಹುಷ ಯಾವುದೇ ಶಾಸಕರೂ ತಂದಿಲ್ಲ. ಯಾವಾಗಲೂ ಕ್ಷೇತ್ರದ ಅಭಿವೃದ್ಧಿಯ ಕುರಿತು ಚಿಂತಿಸುವ ಶಾಸಕರು ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಇಂತಹ ವ್ಯಕ್ತಿಗೆ ನಿಮ್ಮ ಆಶೀರ್ವಾದ ಇರಲಿ ಎಂದು ಹಾರೈಸಿದ ಅವರು ಕಡಿಮೆ ಮಾತು ಹೆಚ್ಚು ದುಡಿಮೆ ಎನ್ನುವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡಿರುವ ಮಾಂಕಾಳ್ ವೈದ್ಯರು ಪ್ರತಿಬಾರಿಯೂ ಹತ್ತಿಪ್ಪತ್ತು ಅರ್ಜಿಗಳನ್ನು ಹಿಡಿದುಕೊಂಡು ಬರುತ್ತಾರೆ ಇಂತಹ ವ್ಯಕ್ತಿತ್ವವನ್ನು ಬೆಳೆಸಿಕೊಂಡಿರುವ ಇವರು ಸದಾ ಕ್ಷೇತ್ರದ ಅಭಿವೃದ್ಧಿಯನ್ನು ಬಯಸುವವ ಕೆಲವೇ ಶಾಸಕರಲ್ಲಿ ಮಾಂಕಾಳು ವೈದ್ಯರು ಒಬ್ಬರು ಎಂದು ಮುಖ್ಯಮಂತ್ರಿ ಹೇಳಿದರು. 

ಆಕ್ಷಾಂಕಿಗಳಿಗೆ ತಣೀರು ಬಿಟ್ಟ ಸಿ.ಎಂ: ಭಟ್ಕಳದ ಕಾಂಗ್ರೇಸ್ ಅಭ್ಯರ್ಥಿ ತಾನೆ ಎಂದು ಹೇಳಿಕೊಂಡು ಬೆಂಗಳೂರು ದಿಲ್ಲಿ ಅಲೆಯುತ್ತಿದ್ದ ಟಿಕೇಟ್ ಅಕಾಂಕ್ಷಿಗಳಿಗೆ ಸಿದ್ದರಾಮಯ್ಯನವರ ಈ ಘೋಷಣೆಯಿಂದಾಗಿ ಅವರ ಕನಸುಗಳಿಗೆ ತಣ್ಣೀರೆರಚಿದಂತಾಗಿದೆ. 
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...