ಸಿಂಡಿಕೇಟ್ ಬ್ಯಾಂಕ್ ಎಟಿ‌ಎಂ ಕಳುವು ಯತ್ನ; ಆರೋಪಿ ಬಂಧನ

Source: S O News service | By Staff Correspondent | Published on 3rd April 2017, 10:52 PM | Coastal News | Incidents | Don't Miss |

ಭಟ್ಕಳ: ನಗರದ ನೆಹರು ರಸ್ತೆಯಲ್ಲಿರುವ ಸಿಂಡಿಕೇಟ್ ಬ್ಯಾಂಕಿನ ಎಟಿ‌ಎಂ ಯಂತ್ರ ಕಳುವು ಯತ್ನದ ಆರೋದಡಿ ನಗರಠಾಣೆಯ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. 
ಸಿಂಡಿಕೇಟ್ ಬ್ಯಾಂಕಿನ ವ್ಯವಸ್ಥಾಪಕರು ನೀಡಿದ ದೂರಿನನ್ವಯ ತನಿಖೆ ಕೈಗೊಂಡ ಪೊಲೀಸರು ಎ.ಟಿ.ಎಂ. ಯಂತ್ರದ ಬಳಿ ಇರುವ ಸಿ.ಸಿ.ಟಿವಿ ಕ್ಯಾಮರಾದ ಫೋಟೇಜ್ ಆದರಿಸಿ ವ್ಯಕ್ತಿಯನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ. 
ಬಂಧಿತನನ್ನು ಸೋಡಿಗದ್ದೆಯ ನಿವಾಸಿ ರಾಘವೇಂದ್ರ ಗಣಪತಿ ಮೊಗೇರ್(೧೯) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಮಾ.೨೯ ರಂದು ಎಟಿ‌ಎಂ ಯಂತ್ರವನ್ನು ಡ್ಯೂಪ್ಲಿಕೇಟ್ ಚಾವಿ ಹಾಗೂ ಕಟಿಂಗ್‌ಪ್ಲೆಯರ್ ಬಳಸಿ ಯಂತ್ರ ಕಳುವು ಮಾಡಲು ಪ್ರಯತ್ನಿಸುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾ ಫೋಟೇಜ್ ನಲ್ಲಿ ದಾಖಲಾಗಿದೆ. ಇದರ ಸುಳಿವನ್ನು ಆಧರಿಸಿ ಸೋಮವಾರದಂದು ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...