ಭಟ್ಕಳ ತಾಲೂಕಿನ ಜಾಮೀಯಾಬಾದ್ ಬಳಿ ಬೈಕ್ ಸವಾರನೋರ್ವ ಪಾದಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಘಟನೆ ವರದಿಯಾಗಿದೆ.
ಅತೀ ವೇಗದಲ್ಲಿ ಜಾಮೀಯಬಾದ್ಗೆ ತೆರಳುತ್ತಿದ್ದ ಬೈಕ್ ಸವಾರನೋರ್ವ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯ ಕಾಲು ಹಾಗೂ ತಲೆಗೆ ಬಲವಾದ ಏಟು ಬಿದ್ದಿದೆ. ತಕ್ಷಣ ತಾಲೂಕಿನ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ೧೦೮ ಅಂಬ್ಯುಲೆನ್ಸ್ ಮೂಲಕ ಕರೆತರಲಾಯಿತು.
ಪಾದಚಾರಿ ಮಹಿಳೆ ತಾಲೂಕಿನ ಹೆರ್ತಾರ ಮೂಲದ ದುರ್ಗಮ್ಮ ಮಂಜಪ್ಪ ನಾಯ್ಕ(೬೦) ಎಂದು ತಿಳಿದು ಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಕೈ, ಕಾಲುಗಳಿಗೆ ಸಣ್ಣಪುಟ್ಟ ಪೆಟ್ಟಾಗಿದ್ದು, ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೈಕ್ ಸವಾರ ಪಾಟ್ನಾ ಮೂಲದ ಜಿತೆಂದ್ರ(೨೪) ಎಂದು ತಿಳಿದು ಬಂದಿದ್ದು, ತಾಲೂಕಿನ ಜಾಮೀಯಾಬಾದ್ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಘಟನೆ ತಿಳಿದು ಸ್ಥಳಕ್ಕಾಗಮಿಸಿದ ಗ್ರಾಮೀಣ ಪೋಲೀಸ್ ಠಾಣಾ ಪೋಲೀಸರು ದೂರನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.