ಭಟ್ಕಳ: ಇಲ್ಲಿನ ಹೆಸ್ಕಾಂ ಬಿಲ್ ವಸೂಲಿ ಮಾಡುವ ವ್ಯಕ್ತಿಯ ಮೇಲೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಜಾಗಟೆಬೈಲ್ ಎಂಬಲ್ಲಿ ಯಾರೋ ಕಿಡಿಗೇಡಿಗಳು ಮುಖಕ್ಕೆ ಮಂಕಿ ಕ್ಯಾಪ್ ಹಾಕಿಕೊಂಡು ಕಣ್ಣಿಗೆ ಖಾರಪುಡಿ ಎರಚಿ ಹಲ್ಲೆಗೆ ಪ್ರಯತ್ನಿಸಿದ್ದಾರೆ ಎಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಆಸಕೇರಿಯ ಈಶ್ವರ ನಾಯ್ಕ ಎಂಬುವವರೇ ಕಿಡಿಗಳಿಂದ ಹಲ್ಲೆಗೆ ಒಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.