ಭಟ್ಕಳ: ಐ.ಸಿ.ಡಿ.ಎಸ್ ಅಸ್ಥಿರಗೊಳಿಸುವ ‘ಹುನ್ನಾರದ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಹಾಗೂ ಪ್ಯಾಕೇಟ್ ಫುಡ್ ಯೋಜನೆ’ ಹಿಂಪಡೆಯುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಸಿ.ಐ.ಟಿ.ಯು ವತಿಯಿಂದ ಗುರುವಾರ ಸಹಾಯಕ ಆಯುಕ್ತರ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿಯನ್ನು ಅರ್ಪಿಸಿತು.
ಕೇಂದ್ರದ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೆನಕಾ ಗಾಂಧಿ ಇತ್ತಿಚೆಗೆ ದೇಶದಲ್ಲಿ ಅಪೌಷ್ಟಿಕತೆ ಅತಿ ಹೆಚ್ಚು ಇರುವ ೧೩೦ ಜಿಲ್ಲೆಗಳ ಅಧಿಕಾರಗಳ ಸಮ್ಮೇಳನವೊಂದರಲ್ಲಿ ಮಾತನಾಡಿ. ‘ಪೂರಕ ಪೋಷಕಾಂಶಗಳನ್ನು ಬಿಸಿ ಮತ್ತು ಬೇಯಿಸಿದ ಅಥವ ಮನೆಗೆ ಒಯ್ಯುವ ರೇಷನ್ ಬದಲು ಒಣ ಮಿಶ್ರಣದೊಂದಿಗೆ ಪೋಷಕಾಂಶ ಪ್ಯಾಕೇಟ್ಗಳಲ್ಲಿ ಪೂರೈಸಲಾಗುವುದು’ ಎಂದು ಹೇಳಿದ್ದು ಆತಂಕಕಾರಿ ವಿಷಯ. ಇದನ್ನು ಪ್ರಯೋಗಿಕವಾಗಿ ದೇಶದ ೩೦೦ ಜಿಲ್ಲೆಗಳಲ್ಲಿ ಆರಂಭಿಸಲು ಹೇಳಲಾಗಿದೆ. ಈ ರೀತಿಯ ಹೇಳಿಕೆಯಿಂದ ಐ.ಸಿ.ಡಿ.ಎಸ್. ನ್ನು ಅಸ್ಥಿತಗೊಳಿಸಲು ಮತ್ತು ಈಗ ಸರ್ಕಾರ ಅಂಗನವಾಆಡಿ ಕೇಂದ್ರಗಳ ಮೂಲಕ ಫಲಾನುಭವಿಗಳಿಗೆ ಕೊಡುವ ಟಿ.ಎಚ್.ಆರ್ ನಲ್ಲಿ ಮೀಸಲಿಟ್ಟ ಹಣವನ್ನು ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಿದಲ್ಲಿ ಇದೇ ಹಣಕ್ಕೆ ಯಾವುದೇ ಪೂರಕ ಪೌಷ್ಟಿಕ ಆಹಾರ ಮುಕ್ತ ಮಾರುಕಟ್ಟೆಯಲ್ಲಿ ಸಿಗದಂತೆ ಮಾಡುವ ಹುನ್ನಾರ ಇದರಲ್ಲಿ ಅಡಗಿದೆ. ಇದು ಖಂಡನೀಯಾವಾಗಿದ್ದು ಈ ಯೋಜನೆಯನ್ನು ತಕ್ಷಣ ಹಿಂಪಡೆಯಬೇಕೆಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಸಿ.ಐ.ಟಿ.ಯು ಸಂಯೋಜಿತವಾಗಿ ನೀಡಿದ ಮನವಿ ಪತ್ರದಲ್ಲಿ ಆರೋಪಿಸಲಾಗಿದೆ.
೧೯೭೫ರಿಂದ ಆರಂಭವಾದ ಐ.ಸಿ.ಡಿ.ಎಸ್. ನಲ್ಲಿ ಮಕ್ಕಳು ಗಭೀಣಿ ಮತ್ತು ಎದೆಹಾಲು ಉಣಿಸುವ ಮಹಿಳೆಯರಲ್ಲಿ ಅಪೌಷ್ಟಿಕತೆಯನ್ನು ಎದುರಿಸುವಲ್ಲಿ ನೆರವಾಗಿದೆ. ಇದು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಾಮಾನ್ಯ ಜನರಿಗೆ ಅಸಂಘಟಿವಾಗಿ ದುಡಿಯುವ ಮಹಿಳೆಯರಿಗೆ ಅವರ ಮನೆ ಬಾಗಿಲಿಲ್ಲಿ ಸಿಗುವ ಅತ್ಯುತ್ತಮ ಶಿಕ್ಷಣ ಮತ್ತು ಆಟದ ಶಾಲೆಯಾಗಿದೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಹಾನಿರ್ದೇಶಕಿ ಡಾ.ಸ್ವಾಮಿನಾಥನ್ ಮತ್ತಿತರರ ವಿಶೇಷಜ್ಞರು ಬೇಯಿಸಿದ ಆಹಾರವೇ ಎಂದಿಂದಿಗೂ ಪ್ಯಾಂಕ್ ಮಾಡಿದ ಆಹಾರಕ್ಕಿಂತ ಆರೋಗ್ಯಕರ ಎಂದಿದ್ದಾರೆ. ಆದ್ದರಿಂದ ದೇಶದ ಎಲ್ಲ ಅಂಗನವಾಡಿ ನೌಕರರ ಹಿತದೃಷ್ಟಿಯಿಂದ ಈ ಕೂಡಲೇ ಇಂತಹ ಅವೈಜ್ಞಾನಿಕ ಸಮುದಾಯದ ಹಿತಕ್ಕೆ ಮಾರಕವಾಗಿರುವ ಮತ್ತು ಬಡ ಅಂಗನವಾಡಿ ನೌಕರರ ವಿರುದ್ಧವಾದ ಯೋಜನೆಯನ್ನು ಕೈಬಿಟ್ಟು ಎಲ್ಲ ೨೫ ಲಕ್ಷ ಅಂಗನವಾಡಿ ನೌಕರರನ್ನು ಖಾಯಂ ಮಾಡಿ, ಕನಿಷ್ಠ ಕೂಲಿ ನಿಡಿ, ಭಾರತ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದ ಶಿಪಾಸ್ಸಿನಂತೆ ಇವರನ್ನು ಕಾರ್ಮಿಕರೆಂದು ಪರಿಗಣಿಸಿ, ಸೇವಾ ಭದ್ರತೆ ನೀಡಿ, ಸಾಮಾಜಿಕ ಸುರಕ್ಷೆಗಳನ್ನು ಹೆಚ್ಚಿಸಬೇಕೆಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಸಂಯೋಜಿತ ಉತ್ತರಕನ್ನಡ ಜಿಲ್ಲಾ ಸಮಿತಿ ಕೇಂದ್ರದ ಬಿಜೆಪಿ ಸರ್ಕಾರವನ್ನು ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಭಟ್ಕಳ ತಾಲೂಕು ಮುಖಂಡರಾದ ಪುಷ್ಪಾವತಿ ನಾಯ್ಕ, ಶಾಂತಿ ಮೊಗೇರ್, ಜಯಲಕ್ಷ್ಮಿ ನಾಯ್ಕ, ಕವಿತಾ ನಾಯ್ಕ, ಸುಧಾಭಟ್ ಪದ್ಮಾನಾಯ್ಕ, ಸುಭಾಷ್ ಕೊಪ್ಪಿಕರ್ ಮುಂತಾದವರು ಹಾಜರಿದ್ದರು.
Read These Next
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಕಾರವಾರ: ಚುನಾವಣಾ ಕಂಟ್ರೋಲ್ ರೂಂ ಗೆ ವೆಚ್ಚ ವೀಕ್ಷಕರ ಭೇಟಿ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರದಿರುವ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ...
ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು
ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...
ಬಳ್ಳಾರಿ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು.
ಬಳ್ಳಾರಿ : 09-ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ...
ಪಟ್ಟಣ ಗ್ರಾಮದಲ್ಲಿ ಎತ್ತಿನ ಬಂಡಿಗಳ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ...
ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು
ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...
ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ
ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...
ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡಲು ಒಪ್ಪಿದ ಕೇಂದ್ರ ಸರ್ಕಾರ
ನವದೆಹಲಿ/ಬೆಂಗಳೂರು: ಕರ್ನಾಟಕಕ್ಕೆ ಸೋಮವಾರದ ಏಪ್ರಿಲ್ 29ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ...