ದೂರು ನೀಡಲು ಹೋದ ವ್ಯಕ್ತಿ ಮೇಲೆ ಠಾಣೆಯಲ್ಲೇ ಹಲ್ಲೆ ; ಇಬ್ಬರ ಬಂಧನ

Source: sonews | By Staff Correspondent | Published on 18th March 2018, 11:25 PM | Coastal News | Don't Miss |

ಭಟ್ಕಳ:ಕ್ಷುಲ್ಲಕ ಕಾರಣಗಳಿಗೆ ಪರಸ್ಪರ ಹೊಡೆದಾಡಿಕೊಂಡು ಠಾಣೆಗೆ ದೂರು ನೀಡಲು ಹೋದ ವ್ಯಕ್ತಿಯ ಮೇಲೆ ಠಾಣೆಯಲ್ಲೆ ಇಬ್ಬರು ಯುವಕರು ಹಲ್ಲೆ ನಡೆಸಿ ಗಾಯಗೊಳಿಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಂಧಿಸಿರುವ ಘಟನೆ ನಗರ ಪೊಲೀಸ್ ಠಾಣೆಯಲ್ಲಿ ಭಾನುವಾರ ನಡೆದಿದೆ.

ಬಂಧಿತ ಆರೋಪಿಗಳನ್ನು ಸಲ್ಮಾನ ಪಠಾಣ್ (25) ಹಾಗೂ ಅಬ್ದುಲ್ ಮೌಸೀನ್ (28) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಗುಳ್ಮಿಯ ಶಬ್ಬಿರ್ ಆಹಮದ್ ಎಂದು ತಿಳಿದುಬಂದಿದ್ದು ಅವರನ್ನು ಚಿಕಿತ್ಸೆಗಾಗಿ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಇಲ್ಲಿನ ಮುಠ್ಠಳ್ಳಿ ಗ್ರಾ.ಪಂ.ನ ಬಿಳಲಖಂಡ(ಗುಳ್ಮೆ)ಯಲ್ಲಿ ದೂರದ ಸಂಬಂಧಿಕನೋರ್ವನ ಸಂಬಂಧಿ ಯುವತಿಗೆ ಹಲ್ಲೆ ಮಾಡಿದ ಎಂಬ ಕಾರಣಕ್ಕೆ ಯುವತಿಯ ಮಾವ ಶಬ್ಬಿರ್ ಎನ್ನುವವರು ಗ್ರಾಮೀಣ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಲು ಹೋದಾಗ ಇಬ್ಬರು ಯುವಕರು ಶಬ್ಬಿರ ಮೇಲೆ ಎರಗಿ ವ್ಯಕ್ತಿಯ ತಲೆಗೆ ಕಲ್ಲಿನಿಂದ ಬಲವಾಗಿ ಹೊಡೆದು ಹಲ್ಲೆ ಮಾಡಿದ್ದಾರೆ ಎಂದು ಎಮ್.ಎ.ರೆಹೆನಾ ಶೇಖ್ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ರಮ ಜರಗಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...