ಜಿಲ್ಲಾಮಟ್ಟದ ಸೀರತ್ ಪ್ರಬಂಧ ಸ್ಪರ್ಧೆ: ಸುಮನಾ ಗಣಪತಿ ಆಚಾರ್ಯ ಪ್ರಥಮ

Source: sonews | By Staff Correspondent | Published on 20th February 2018, 1:04 AM | Coastal News | Don't Miss |

ಭಟ್ಕಳ: ಜಮಾಆತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆ ‘ಪ್ರವಾದಿ ಮುಹಮ್ಮದ್ ಪೈಗಂಬರ್ ಮಾನವತೆಯ ವಕ್ತಾರ’ ಎಂಬ ವಿಷಯದಡಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸೀರತ್ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದ್ದು ಶಿರಸಿ ಮರಾಠಿಕೊಪ್ಪದ  ಸುಮನಾ  ಗಣಪತಿ ಆಚಾರ್ಯ ಪ್ರಥಮ ಸ್ಥಾನಪಡೆದುಕೊಂಡಿದ್ದಾರೆ ಎಂದು ಪ್ರಬಂಧ ಸ್ಪರ್ಧೆಯ ಸಂಚಾಲಕ ಎಂ.ಆರ್.ಮಾನ್ವಿ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಟ್ಕಳದ ವಿಜಯಲಕ್ಷ್ಮೀ ದ್ವಿತೀಯ ಸ್ಥಾನ, ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾರಾ ವಾಸು ನಾಯ್ಕ ತೃತಿಯಾ ಸ್ಥಾನ ಪಡೆದುಕೊಂಡಿದ್ದು ಫೆ.21 ರಂದು ಸಂಜೆ 4.30ಕ್ಕೆ ಶಿರಾಲಿಯ ಜನತಾ ವಿದ್ಯಾಲಯ ಪ್ರೌಢಶಾಲಾ ಮೈದಾನದಲ್ಲಿ ಜರಗುವ ‘ಹಲವು ಧರ್ಮಗಳು ಒಂದು ಭಾರತ’ ಸೌಹಾರ್ಧ ಸಮಾವೇಶದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9886455416 ಮುಬೈಲ್ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...